Tuesday, May 7, 2024
spot_imgspot_img
spot_imgspot_img

ಉಪ್ಪಿನಂಗಡಿ: ಹಾಡಹಗಲೇ ಮನೆಯ ವರಾಂಡದಿಂದ ನಾಯಿಮರಿಯನ್ನು ಹೊತ್ತೊಯ್ದ ಚಿರತೆ

- Advertisement -G L Acharya panikkar
- Advertisement -
vtv vitla

ಉಪ್ಪಿನಂಗಡಿ: ಚಿರತೆಯೊಂದು ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಮಟಮಟ ಮಧ್ಯಾಹ್ನವೇ ಹೊತ್ತೊಯ್ದ ಘಟನೆ ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ.

ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಗಣೇಶ್ ಎಂಬವರ ಮನೆಯ ಹತ್ತಿರ ಕಾಣಿಸಿಕೊಂಡ ಚಿರತೆ ವರಾಂಡದಲ್ಲಿ ಮಲಗಿದ್ದ 40 ದಿನ ಪ್ರಾಯದ ಪಗ್ ಜಾತಿಯ ನಾಯಿ ಮರಿಯನ್ನು ಕಚ್ಚಿಕೊಂಡು ಹೊತ್ತೊಯ್ದಿದೆ. ಗಣೇಶ್ ಪತ್ನಿ ಪೂರ್ಣಿಮ ಕಣಿಯೂರು ಗ್ರಾಮ ಪಂಚಾಯತ್‌ನಲ್ಲಿ ಪಿಡಿಒ ಆಗಿದ್ದು, ಅವರು ಕಚೇರಿಗೆ ಹೋಗಿದ್ದರು. ಕಲ್ಲೇರಿಯಲ್ಲಿ ಅಂಗಡಿ ಹೊಂದಿದ್ದ ಗಣೇಶ್ ಅವರು ಈ ಸಂದರ್ಭ ಮನೆಯಲ್ಲಿ ಒಬ್ಬರೇ ಇದ್ದಾಗ ಈ ಘಟನೆ ಸಂಭವಿಸಿದೆ.

- Advertisement -

Related news

error: Content is protected !!