Saturday, June 28, 2025
spot_imgspot_img
spot_imgspot_img

ಉಪ್ಪಿನಂಗಡಿ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳ ಅಮಾನತು; ಮಾಧ್ಯಮ ಪ್ರತಿನಿಧಿಗಳ ಮೇಲೆ ಮುಸ್ಲಿಂ ವಿದ್ಯಾರ್ಥಿಗಳ ಗೂಂಡಾಗಿರಿ

- Advertisement -
- Advertisement -

ಉಪ್ಪಿನಂಗಡಿ: ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 5 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಎಂದು ಪ್ರಾಂಶುಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಮುಸ್ಲಿಂ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.

ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ವಿವಾದ ತಾರಕ್ಕಕ್ಕೇರಿದ್ದು, ಹಿಜಾಬ್ ಕುರಿತಾಗಿ ಮೃದು ಧೋರಣೆ ತೋರಿಸಲಾಗುತ್ತಿದೆ ಎಂದು ಆರೋಪಿಸಿ ಹಿಂದೂ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದಿದ್ದರು.

ಪ್ರತಿಭಟನೆ ನಡೆಯುತ್ತಿರುವ ವೇಳೆ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಮುಸ್ಲಿಂ ವಿದ್ಯಾರ್ಥಿಗಳು ಹಲ್ಲೆಗೆ ಯತ್ನಿಸಿದ್ದು, ನಂತರ ವರದಿಗಾರರನ್ನು ಕೊಠಡಿಯೊಳಗೆ ಕೂಡಿ ಹಾಕಿ ವಿಕೃತಿ ಮೆರೆದಿದ್ದಾರೆ.

ಮಾಧ್ಯಮ ಪ್ರತಿನಿಧಿಗಳಲ್ಲಿ ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದು, ವರದಿಗಾಗಿ ಮಾಡಿದ ವಿಡಿಯೋಗಳನ್ನು ವಿದ್ಯಾರ್ಥಿಗಳು ಬಲತ್ಕಾರವಾಗಿ ಡಿಲೀಟ್ ಮಾಡಿಸಿದ್ದಾರೆ.

ಈ ವಿವಾದ ಹಿನ್ನಲೆ ಕಾಲೇಜಿನಲ್ಲಿ ಭದ್ರತೆಯ ದೃಷ್ಟಿಯಿಂದ ಉಪ್ಪಿನಂಗಡಿ ಪೊಲೀಸರನ್ನು ನಿಯೋಜಿಸಲಾಗಿದೆ, ಆದರೆ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಯತ್ನಿಸಿದ ವಿದ್ಯಾರ್ಥಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದಾಗಿ ತಿಳಿದುಬಂದಿದೆ.

vtv vitla
vtv vitla
- Advertisement -

Related news

error: Content is protected !!