Tuesday, April 30, 2024
spot_imgspot_img
spot_imgspot_img

ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳ ನಿವಾಸಿ ಹೃದಯಾಘಾತದಿಂದ ನಿಧನ

- Advertisement -G L Acharya panikkar
- Advertisement -
vtv vitla

ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳ ನಿವಾಸಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.

ಬಂಟ್ವಾಳ ವಗ್ಗ ನಿವಾಸಿ ಉಸ್ಮಾನ್(67) ಮೃತರು. ಉಸ್ಮಾನ್ ಅವರು ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾಗೆ ಉಮ್ರಾ ಯಾತ್ರೆಗೆ ತೆರಳಿದ್ದರು. ಅಲ್ಲಿ ಅವರಿಗೆ ಹೃದಯಾಘಾತವಾಗಿತ್ತು. ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಮೆಕ್ಕಾದ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

ಗಂಭೀರ ಸ್ಥಿತಿಯಲ್ಲಿ ಕಿಂಗ್ ಫೈಸಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಸ್ಮಾನ್ ಅವರು ನಿನ್ನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೂಲಗಳ ಪ್ರಕಾರ ಅವರ ಅಂತ್ಯಕ್ರಿಯೆ ಕೂಡ ಅಲ್ಲಿಯೇ ನಡೆಯಲಿದೆ ಎನ್ನಲಾಗಿದೆ.

- Advertisement -

Related news

error: Content is protected !!