Wednesday, May 15, 2024
spot_imgspot_img
spot_imgspot_img

ಉಳ್ಳಾಲ: ಉದ್ಯಮಿ ಬಿ.ಎಂ. ಭಾಷಾ ಮನೆಗೆ ನುಗ್ಗಲು ಯತ್ನಿಸಿದ ಪ್ರಕರಣ; ವಿಹೆಚ್ ಪಿ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಕೇಸ್ ದಾಖಲು!

- Advertisement -G L Acharya panikkar
- Advertisement -

ಉಳ್ಳಾಲ: ಉದ್ಯಮಿ ಬಿ.ಎಂ. ಭಾಷಾ ಅವರ ಮನೆಗೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಹಾಗೂ ಮತ್ತಿತರ ಕಾರ್ಯಕರ್ತರ ಮೇಲೆ ಸೂಕ್ತ ಕ್ರಮಕೈಗೊಳ್ಳಲು ಉಳ್ಳಾಲ ಮೇಲಂಗಡಿಯ ಅಬೂಬಕರ್ ಅವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆ.11ರಂದು ಉದ್ಯಮಿ ಬಿಎಂ ಬಾಷಾರ ಮನೆಯ ಮುಂದೆ ಶರಣ್ ಪಂಪ್‌ವೆಲ್ ನೇತೃತ್ವದ ಬಜರಂಗದಳ ಕಾರ್ಯಕರ್ತರು ಸೇರಿಕೊಂಡು ಒಂದು ಧರ್ಮವನ್ನು ಹೀಯಾಳಿಸಿ ಪ್ರಚೋದನಕಾರಿ ಘೋಷಣೆ ಕೂಗಿ ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಪೊಲೀಸರು ಸಕಾಲದಲ್ಲಿ ಸ್ಥಳಕ್ಕೆ ಆಗಮಿಸದೇ ಇದ್ದಿದ್ದರೆ ಶರಣ್ ಪಂಪ್‌ವೆಲ್ ನೇತೃತ್ವದ ಗುಂಪು ಭಾಷಾರ ಮನೆಯೊಳಗೆ ಪ್ರವೇಶಿಸಿ ದಾಂಧಲೆ ನಡೆಸುವ ಸಾಧ್ಯತೆ ಇತ್ತು.

ಶಾಂತಿಯುತವಾಗಿದ್ದ ಉಳ್ಳಾಲ ಪರಿಸರದಲ್ಲಿ ಶಾಂತಿ ಕದಡಲು ಯತ್ನಿಸಿದ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾದ ಶರಣ್ ಪಂಪ್‌ವೆಲ್ ಮತ್ತಿತರ ಕಾರ್ಯಕರ್ತರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರಗಿಸಬೇಕೆಂದು ಉಳ್ಳಾಲ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಅಬೂಬಕ್ಕರ್ ಆಗ್ರಹಿಸಿದ್ದಾರೆ.

- Advertisement -

Related news

error: Content is protected !!