Tuesday, May 14, 2024
spot_imgspot_img
spot_imgspot_img

ಉಳ್ಳಾಲ: ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ನಷ್ಟ; ಅಂಗಡಿಯಲ್ಲೇ ಆತ್ಮಹತ್ಯೆ ಶರಣಾದ ಮಾಲಕ

- Advertisement -G L Acharya panikkar
- Advertisement -
vtv vitla

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‌‌ನಲ್ಲಿರುವ ಟೈಲರಿಂಗ್‌ ವಸ್ತುಗಳ ಮಳಿಗೆ ಥ್ರೆಡ್ ಹೌಸ್‌ನ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕಣೀರು ತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ಬು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ ಮನೆಯಿಂದ ಹೊರಟಿದ್ದು, ಎದುರಿನ ಶಟರ್ ಕೆಳಗೆಳೆದು ಅಂಗಡಿಯೊಳಗೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಪ್ರವೀಣ್ ಅವರ ಸ್ನೇಹಿತರೋರ್ವರು ಬಂದು ಶಟರ್ ಎತ್ತಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಘಟನಾ ಸ್ಥಳದಲ್ಲಿ ಪ್ರವೀಣ್ ಅವರು ಬರೆದಿರುವ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ ನನ್ನ ಸಾಲಕ್ಕೆ ನಾನೇ ಕಾರಣ, ಅಮ್ಮ ಪತ್ನಿ, ಮಗುವಲ್ಲಿ ಸಾರಿ ಅಂತ ಉಲ್ಲೇಖಿಸಿದ್ದಾರೆ, ಪ್ರವೀಣ್‌ ಅವರು ಕ್ರಿಕೆಟ್ ಬೆಟ್ಟಿಂಗಲ್ಲಿ ತೊಡಗಿದ್ದು ನಿನ್ನೆ ರಾತ್ರಿಯ ಐಪಿಎಲ್ ಪಂದ್ಯದಲ್ಲಿ ಕೈಸುಟ್ಟುಕೊಂಡು ಆತ್ಮಹತ್ಯೆ ನಿರ್ಧಾರ ಕೈಗೊಂಡಿರಬಹುದೆಂದು ಅವರನ್ನ ಹತ್ತಿರದಿಂದ ಬಲ್ಲವರು ತಿಳಿಸಿದ್ದಾರೆ. ಮೃತರು ತಾಯಿ, ಪತ್ನಿ ಓರ್ವ ಪುತ್ರನನ್ನು ಅಗಲಿದ್ದಾರೆ.

- Advertisement -

Related news

error: Content is protected !!