Sunday, June 29, 2025
spot_imgspot_img
spot_imgspot_img

ಉಳ್ಳಾಲ: ಚಿಟ್ ಫಂಡ್ ವ್ಯವಹಾರದಲ್ಲಿ ನಷ್ಟ; ವ್ಯಕ್ತಿ ಆತ್ಮಹತ್ಯೆಗೆ ಶರಣು

- Advertisement -
- Advertisement -
vtv vitla

ಉಳ್ಳಾಲ: ಚಿಟ್ ಫಂಡ್ ವ್ಯವಹಾರದಿಂದ ನಷ್ಟಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ.

ಉಳ್ಳಾಲ ಸಮೀಪದ ಸೋಮೇಶ್ವರದ ಮಾಡೂರು ನಿವಾಸಿ ಜಯರಾಂ ಶೆಟ್ಟಿ (70) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. ಚಿಟ್ ಫಂಡ್ ನಿಂದ ಆದಂತಹ ಆರ್ಥಿಕ ನಷ್ಟದಿಂದ ಇವರು ಮಾನಸಿಕವಾಗಿ ನೊಂದಿದ್ದರು.

ನಿನ್ನೆ ರಾತ್ರಿ ಮನೆಯಲ್ಲಿ ಒಬ್ಬಂಟಿಯಾಗಿ ಇರುವ ವೇಳೆ ಮನೆಯ ಕೋಣೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಪತ್ನಿ ದೂರು ನೀಡಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
- Advertisement -

Related news

error: Content is protected !!