- Advertisement -
- Advertisement -
ಉಳ್ಳಾಲ: ಪಿಲಾರು ಜಾತ್ರೆಗೆಂದು ದೊಡ್ಡಮ್ಮನ ಮನೆಗೆ ಬಂದಿದ್ದ ಯುವಕನೋರ್ವ ಮಲಗುವುದಾಗಿ ಹೇಳಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪ್ರಕಾಶ್ ನಗರ ಎಂಬಲ್ಲಿ ನಡೆದಿದೆ. ಮಂಗಳೂರು ಪಡೀಲು ನಿವಾಸಿ ಸೌರವ್ (21) ಆತ್ಮಹತ್ಯೆಗೆ ಶರಣಾದ ಯುವಕ.
ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಶನಿವಾರ ಮತ್ತು ಆದಿತ್ಯವಾರ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆದಿತ್ತು. ಪಿಲಾರು ಪ್ರಕಾಶ್ ನಗರದ ಸುಜಾತ ಅವರ ಮನೆಗೆ ಪಡೀಲಿನ ತಂಗಿಯ ಮಗ ಸೌರವ್ ನಿನ್ನೆ ಬೆಳಗ್ಗೆ ಬಂದಿದ್ದು ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆ. ಸಂಜೆ ಆದಾಗ ಸೌರವ್ ತಾಯಿ ಮಗನನ್ನ ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ತಿಳಿದುಬಂದಿದೆ.
ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸೌರವ್ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುವುದು ಇನ್ನೂ ಸ್ಪಷ್ಟವಾಗಿಲ್ಲ.
- Advertisement -