Monday, May 6, 2024
spot_imgspot_img
spot_imgspot_img

ಉಳ್ಳಾಲ: ಜಾನುವಾರು ಕಳವುಗೈದು, ಜೀವಬೆದರಿಕೆಯೊಡ್ಡಿದ ಬಂಟ್ವಾಳ ಮೂಲದ ಮೂವರು ಆರೋಪಿಗಳ ಬಂಧನ..!

- Advertisement -G L Acharya panikkar
- Advertisement -
astr

ಉಳ್ಳಾಲ: ತಲವಾರು ದೊಣ್ಣೆ ತೋರಿಸಿ ಜೀವಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌.

ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರದ ಜಾಬೀರ್‌ (24), ಫರಂಗಿಪೇಟೆ ಅಮ್ಮೆಮ್ಮಾರ್‌ ನಿವಾಸಿ ಹೈದರಾಲಿ(24), ಬಂಟ್ವಾಳ ಸಂಗಬೆಟ್ಟುವಿನ ಮುಹಮ್ಮದ್‌ ಆರೀಫ್‌ (30)ಬಂಧಿತರು. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಶೋಧ ಕಾರ್ಯ ನಡೆದಿದೆ.

ಮಾಡೂರು ಸೈಟ್‌ ನಿವಾಸಿ ಸತೀಶ್‌ ಎಂಬವರಿಗೆ ಸೇರಿದ ರೂ. 30,000 ಬೆಲೆಬಾಳುವ 4 ವರ್ಷ ಪ್ರಾಯದ ಎತ್ತನ್ನು ಆ.22. ರಂದು ಮಾಡೂರು ವನದುರ್ಗ ಅಯ್ಯಪ್ಪ ಮಂದಿರದ ಅಶ್ವತ್ಥಕಟ್ಟೆಯ ಬಳಿ ಕಟ್ಟಿ ಹಾಕಲಾಗಿತ್ತು. ನಸುಕಿನ 4.25ಕ್ಕೆ ಇಬ್ಬರು ಆರೋಪಿಗಳು ಬಲಾತ್ಕಾರವಾಗಿ ಹಿಂಸಾತ್ಮಕವಾಗಿ ಎಳೆದೊಯ್ಯುವಾಗ ಜೋರಾಗಿ ಕೂಗುವುದನ್ನು ಗಮನಿಸಿ ಮಾಲೀಕ ಸತೀಶ್‌ ಅವರು ಓಡಿಬಂದಿದ್ದರು.ಈ ವೇಳೆ ತಲವಾರು ಮತ್ತು ದೊಣ್ಣೆ ತೋರಿಸಿದ ದುಷ್ಕರ್ಮಿಗಳು ಜೀವಬೆದರಿಕೆಯೊಡ್ಡಿ ಜಾನುವಾರನ್ನು ಕಾರಿನೊಳಗಡೆ ತುಂಬಿಸಿ ಸ್ಥಳದಿಂದ ಪರಾರಿಯಾಗಿದ್ದರು ಎಂದು ಕೇಸ್ ದಾಖಲಾಗಿತ್ತು.

- Advertisement -

Related news

error: Content is protected !!