Saturday, July 5, 2025
spot_imgspot_img
spot_imgspot_img

ಉಳ್ಳಾಲ: ವ್ಯಕ್ತಿಯೋರ್ವರಿಗೆ ಚೂರಿ ಇರಿತ; ವೈಯಕ್ತಿಕ ದ್ವೇಷದಿಂದಾಗಿ ಕೃತ್ಯ ಎಸಗಿರುವ ಶಂಕೆ..!

- Advertisement -
- Advertisement -

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಉಳ್ಳಾಲದ ಬಳಿ ವ್ಯಕ್ತಿಯೊಬ್ಬರಿಗೆ ಚೂರಿ ಇರಿದ ಘಟನೆ ಛೋಟಾ ಮಂಗಳೂರು ರಸ್ತೆಯಲ್ಲಿ ಇಂದು ಸಂಜೆ ನಡೆದಿದೆ.

ಗ್ಯಾಸ್ ರಿಪೇರಿ ಅಂಗಡಿ ಮಾಲೀಕ ಹರೀಶ್ ಎಂಬವವರು ಚೂರಿ ಇರಿತಕ್ಕೆ ಒಳಗಾದವರು ಎಂದು ಗುರುತಿಸಲಾಗಿದೆ.

ಮೊಗವೀರಪಟ್ನ ನಿವಾಸಿ ವಿಶಾಲ್ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ವೈಯಕ್ತಿಕ ದ್ವೇಷದಿಂದ ನಡೆದಿರುವ ಕೃತ್ಯ ಎಂದು ಶಂಕಿಸಲಾಗಿದೆ. ಸದ್ಯ ವಿಶಾಲ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಉಳ್ಳಾಲ ಪೊಲೀಸರು ಗಾಯಾಳುವನ್ನು ತೊಕ್ಕೊಟ್ಟು ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!