Saturday, June 28, 2025
spot_imgspot_img
spot_imgspot_img

ಉಳ್ಳಾಲ: ಪಾಡಾಂಗರ ಭಗವತೀ ಕ್ಷೇತ್ರದಲ್ಲಿ ದೈವದ ಮೊಗವನ್ನೇ ಎಗರಿಸಿದ ಖದೀಮರು!

- Advertisement -
- Advertisement -

ಉಳ್ಳಾಲ: ಮಂಗಳೂರು ಹೊರವಲಯದಲ್ಲಿರುವ ಉಳ್ಳಾಲದ ಮಾಸ್ತಿಕಟ್ಟೆ ಕುಮೇರು ಪಾಡಾಂಗರ ಪೂಮಾಲೆ ಭಗವತೀ ಕ್ಷೇತ್ರದ ಅಣ್ಣಪ್ಪ ದೇವಸ್ಥಾನದಲ್ಲಿ ದೈವದ ಮೊಗವನ್ನೇ ಕಳವು ನಡೆಸಿರುವ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ಮಾಸ್ತಿಕಟ್ಟೆಯ ತೀಯ ಸಮಾಜ ಕುಟುಂಬಸ್ಥರ ಆರಾಧ್ಯ ಕುಮೇರು ಪಾಡಂಗರ ಪೂಮಾಲೆ ಭಗವತೀ ಕ್ಷೇತ್ರದ ಅಣ್ಣಪ್ಪ ದೈವದ ಗುಡಿಯ ಬಾಗಿಲ ಬೀಗ ಒಡೆದು ಪಂಚಲೋಹದ ಮೊಗವನ್ನ ಖದೀಮರು ಕಳ್ಳತನ ನಡೆಸಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ದೈವಸ್ಥಾನದ ಮುಖ್ಯ ಅರ್ಚಕರಿಗೆ ಮಾಹಿತಿ ನೀಡಿ ದ್ದು, ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!