- Advertisement -
- Advertisement -
ಉಳ್ಳಾಲ: ಬಾಲಕನಿಗೆ ಮದರಸದ ಶಿಕ್ಷಕನೋರ್ವ ಹಲ್ಲೆ ನಡೆಸಿರುವ ಘಟನೆ ಹರೇಕಳ ಗ್ರಾಮದ ದೇರಿಕಟ್ಟೆ ಎಂಬಲ್ಲಿ ನಡೆದಿದ್ದು, ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರೇಕಳ ದೇರಿಕಟ್ಟೆ ಮಹಮ್ಮದ್ ಎಂಬವರ ಪುತ್ರ ಹಫೀಲ್ ಅಹಮ್ಮದ್ (11) ಮೇಲೆ ಶಿಕ್ಷಕ ಉಸ್ತದ್ ಯಹ್ಯಾ ಫೈಝಿ ಹಲ್ಲೆ ನಡೆಸಿದ್ದಾರೆ.
ಇನ್ನು ಮದರಸಕ್ಕೆ ತೆರಳಿದ್ದ ಬಾಲಕನಿಗೆ ಯಾವುದೋ ವಿಚಾರವೊಂದಕ್ಕೆ ಸಂಬಂಧಿಸಿ ಶಿಕ್ಷಕ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಕುರಿತು ಬಾಲಕನ ಹೆತ್ತವರು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
- Advertisement -