- Advertisement -
- Advertisement -
ಉಳ್ಳಾಲ: ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಯುವಕನೋರ್ವ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ನಡೆದಿದೆ.
ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಅಕ್ಷಯ್ ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿವಸಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದನಂತೆ. ಮೊಬೈಲ್ ಶಾಪ್ ಮಾಲಕರು ಕರೆ ಮಾಡಿದರೂ ಅಕ್ಷಯ್ ಕರೆ ಸ್ವೀಕರಿಸುತ್ತಿರಲಿಲ್ಲ ಎನ್ನಲಾಗಿದೆ. ಇಂದು ಬೆಳಗ್ಗೆ ಅಕ್ಷಯ್ ತಾಯಿ, ಮನೆ ಹತ್ತಿರದ ಬೀಡಿ ಬ್ರಾಂಚಿಗೆ ಬೀಡಿ ಕೊಡಲು ತೆರಳಿದ್ದ ವೇಳೆ ಮನೆಯ ಹಾಲಿನ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಖಿನ್ನತೆಯಿಂದ ಅಕ್ಷಯ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ.
ಮೃತ ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
- Advertisement -