Friday, April 19, 2024
spot_imgspot_img
spot_imgspot_img

ಉಳ್ಳಾಲ: ಮೀನಿನ ವ್ಯಾಪಾರಿಗೆ ತಲವಾರಿನಿಂದ ಹಲ್ಲೆಗೈದು ಲಕ್ಷಾಂತರ ರೂಪಾಯಿ ದೋಚಿದ ದುಷ್ಕರ್ಮಿಗಳು

- Advertisement -G L Acharya panikkar
- Advertisement -
vtv vitla
vtv vitla

ಉಳ್ಳಾಲ: ಕಾರಿನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಮೀನಿನ ಟೆಂಪೋವೊಂದನ್ನು ತಡೆದು ನಿಲ್ಲಿಸಿ, ವ್ಯಾಪಾರಿ ಮೇಲೆ ತಲವಾರಿನಿಂದ ಹಲ್ಲೆಗೈದ ಘಟನೆ ನಡೆದಿದೆ. ಹಲ್ಲೆ ನಡೆಸಿದ ದುಷ್ಕರ್ಮಿಗಳು ಎರಡು ಲಕ್ಷ ರೂಪಾಯಿ ದರೋಡೆಗೈದಿದ್ದಾರೆ. ರಾ.ಹೆ. 66 ರ ಆಡಂಕುದ್ರು ಎಂಬಲ್ಲಿ ಈ ಘಟನೆ ನಡೆದಿದ್ದು ಉಳ್ಳಾಲ ಮುಕ್ಕಚ್ಚೇರಿಯ ಮುಸ್ತಾಫ(47) ತಲವಾರಿನ ಏಟಿನಿಂದ ಗಂಭೀರ ಗಾಯಗೊಂಡ ಮೀನಿನ ವ್ಯಾಪಾರಿ,
.

ಇಂದು ಬೆಳಗ್ಗೆ 6.15ರ ವೇಳೆಗೆ ಉಳ್ಳಾಲ ನೇತ್ರಾವತಿ ಸೇತುವೆ ಬಳಿಯ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದ್ದು, ಮುಸ್ತಾಫ ಅವರು ಎಂದಿನಂತೆ ಬೆಳಗ್ಗೆ ತನ್ನ ಏಸ್ ಟೆಂಪೋದಲ್ಲಿ ಮಂಗಳೂರಿನ ದಕ್ಕೆಗೆ ಮೀನು ತರಲೆಂದು ಹೊರಟಿದ್ದರು. ಟೆಂಪೋದಲ್ಲಿ ಮಾಸ್ತಿಕಟ್ಟೆಯ ಮೂಸ ಎಂಬವರು ಜೊತೆಗೆ ಪಯಣಿಸುತ್ತಿದ್ದರು. ಟೆಂಪೊ ಆಡಂಕುದ್ರು ತಲುಪುತ್ತಿದ್ದಂತೆಯೇ ಹಿಂದಿನಿಂದ ಧಾವಿಸಿ ಬಂದ ಕೆಂಪು ಬಣ್ಣದ ರಿಟ್ಝ್‌ ಕಾರು ಮುಸ್ತಾಫ ಅವರನ್ನು ತಡೆದು ನಿಲ್ಲಿಸಿದೆ.

ಕಾರಿನಲ್ಲಿದ್ದ ಇಬ್ಬರು ಮುಸುಕುಧಾರಿಗಳು ಕೆಳಗಿಳಿದು ಮುಸ್ತಾಫ ಅವರಲ್ಲಿದ್ದ ಹಣದ ಬ್ಯಾಗನ್ನು ಕೊಡುವಂತೆ ಹೇಳಿದ್ದಾರೆ. ಟೆಂಪೋದಲ್ಲಿಯೇ ಇದ್ದ ಮುಸ್ತಾಫ ಅವರು ಹಣ ಕೊಡಲು ನಿರಾಕರಿಸಿದ ಕಾರಣ, ತಲವಾರನ್ನು ಮುಸ್ತಾಫ ಅವರ ಕುತ್ತಿಗೆಗೆ ಇಟ್ಟು ಹಣ ಎಗರಿಸಿದ್ದಾರೆ. ಆದರೂ ಇದನ್ನು ವಿರೋಧಿಸಿದ ಮುಸ್ತಾಫ ಅವರು ತಲವಾರಿನ ಅಲಗನ್ನು ಗಟ್ಟಿಯಾಗಿ ಎರಡು ಕೈಗಳಲ್ಲಿ ಹಿಡಿದಿದ್ದು ಆಗಂತುಕರು ತಲವಾರನ್ನು ಎಳೆದಾಗ ಎರಡೂ ಕೈಗಳಿಗೂ ಗಂಭೀರ ಗಾಯಗಳಾಗಿದೆ.

ಮುಸ್ತಾಫ ಅವರಲ್ಲಿದ್ದ 2 ಲಕ್ಷ 5 ಸಾವಿರ ರೂಪಾಯಿ ಹಣವನ್ನು ದರೋಡೆಕೋರರು ದೋಚಿ ಪರಾರಿಯಾಗಿದ್ದಾರೆ. ಗಾಯಾಳು ಮುಸ್ತಾಫ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರೋಡೆ ನಡೆದ ಸ್ಥಳಕ್ಕೆ ಎಸಿಪಿ ದಿನಕರ ಶೆಟ್ಟಿ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಸಿಸಿ ಕ್ಯಾಮೆರಾ ಫೂಟೇಜನ್ನ ಪರಿಶೀಲನೆ ನಡೆಸಿದೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!