Friday, April 26, 2024
spot_imgspot_img
spot_imgspot_img

ಉಳ್ಳಾಲ: ವಿದೇಶಕ್ಕೆ ತೆರಳುತ್ತೇನೆಂದು ಹೇಳಿ ಹೋದ ವ್ಯಕ್ತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಉಳ್ಳಾಲ: ವಿದೇಶಕ್ಕೆ ತೆರಳುತ್ತೇನೆ ಎಂದು ಹೇಳಿಹೋದ ವ್ಯಕ್ತಿಯೋರ್ವರು ತಡರಾತ್ರಿ ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೈದಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕುತ್ತಾರು ತೇವುಲ ನಿವಾಸಿ ಸುರೇಶ್‌ ಸಾಲಿಯಾನ್‌ (48) ಎನ್ನಲಾಗಿದೆ.

ಕಳೆದ ಹಲವು ವರ್ಷಗಳಿಂದ ಸುರೇಶ್‌ ತೊಕ್ಕೊಟ್ಟಿನಲ್ಲಿ ಪ್ಲ್ಯಾನಿಂಗ್‌ ಪ್ಯಾಲೇಸ್‌ ಮೂಲಕ ಆರ್ಕಿಟೆಕ್ಟ್, ಭೂ ವ್ಯವಹಾರ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು.

ಮನೆಯಿಂದ ಮಕ್ಕಳಲ್ಲಿ ತಾನು ವಿದೇಶಕ್ಕೆ ತೆರಳುತ್ತೇನೆ ಎಂದು ತಿಳಿಸಿ ಕಾರು ಮತ್ತು ಬಂಗಾರವನ್ನು ಮನೆಯಲ್ಲೇ ಬಿಟ್ಟು ಬಂದಿದ್ದರು. ಸಂಜೆಯ ತನಕ ಗೆಳೆಯರೊಂದಿಗೆ ಮಾತನಾಡಿದ್ದ ಅವರು ತಡರಾತ್ರಿ ತನ್ನ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ ನಾನು ದೂರ ಹೋಗುತ್ತೇನೆ ಎಂದು ಹೇಳಿ ಬಳಿಕ ಫೋನ್‌ ಸ್ವಿಚ್‌ ಆಫ್‌ ಮಾಡಿದ್ದರು.

ಸಮುದ್ರ ಕಿನಾರೆಯಲ್ಲಿ ಸುರೇಶ್‌ ಅವರು ಧರಿಸಿದ್ದ ಚಪ್ಪಲಿ ದೊರಕಿದ್ದು ಇದರ ಆಧಾರದಲ್ಲಿ ಸುರೇಶ ಅವರ ಕುಟುಂಬ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇದೀಗ ಸಮುದ್ರದಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!