Sunday, June 29, 2025
spot_imgspot_img
spot_imgspot_img

ಉಳ್ಳಾಲ : ಸಮುದ್ರ ತೀರದಲ್ಲಿ ಕಾರು ಡೀಲರ್ ನಾಪತ್ತೆ; ಚಪ್ಪಲಿ, ಮೊಬೈಲ್ ಮತ್ತು ಕಾರು ಪತ್ತೆ..!

- Advertisement -
- Advertisement -

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆಯಲ್ಲಿ ಉಳ್ಳಾಲದ ಧರ್ಮನಗರ ನಿವಾಸಿ ಕಾರು ಡೀಲರ್ ಆಗಿರುವ ವ್ಯಕ್ತಿಯ ಚಪ್ಪಲಿ, ಮೊಬೈಲ್ ಮತ್ತು ಕಾರು ಪತ್ತೆಯಾಗಿದೆ.

ಜಿನ್ನಪ್ಪ ಪೂಜಾರಿ ಎಂಬವರ ಪುತ್ರ ವಸಂತ್ ಅಮೀನ್ (49) ನಾಪತ್ತೆಯಾದ ವ್ಯಕ್ತಿಯಾಗಿದ್ದಾರೆ. ಮೂಲತ: ಉಳ್ಳಾಲದ ಬಸ್ತಿಪಡ್ಪು ನಿವಾಸಿ ಆಗಿರುವ ಇವರು ಉಳ್ಳಾಲದ ಧರ್ಮನಗರದಲ್ಲಿ ಕೆಲ ತಿಂಗಳುಗಳ ಹಿಂದಷ್ಟೇ ಸುಸಜ್ಜಿತವಾದ ಮನೆಯನ್ನು ಕಟ್ಟಿದ್ದರು. ವಿವಾಹಿತರಾಗಿರುವ ವಸಂತ್ ಅವರಿಗೆ ಎಳೆಯ ಹರೆಯದ ಹೆಣ್ಣು ಮಗುವಿದ್ದಾಳೆ. ಇಂದು ಬೆಳಿಗ್ಗೆ ಮನೆಯಿಂದ ಪತ್ನಿ ಯಲ್ಲಿ ತಿಳಿಸಿ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.

ಸ್ಥಳೀಯರು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರು ಹಾಗೂ ರುದ್ರಪಾದೆಯಲ್ಲಿ ಪರ್ಸ್ ,ಚಪ್ಪಲಿ ಹಾಗೂ ಮೊಬೈಲ್ ಅನ್ನು ಪತ್ತೆ ಹಚ್ಚಿದ್ದಾರೆ. ಸ್ಥಳೀಯ ಈಜುಗಾರರ ಸಹಾಯದಿಂದ ಸಮುದ್ರದಲ್ಲಿ ವಸಂತ್ ಅಮೀನ್ ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಮಿಸ್ಸಿಂಗ್ ಕೇಸು ದಾಖಲಾಗಿದೆ.

- Advertisement -

Related news

error: Content is protected !!