- Advertisement -
- Advertisement -


ಉಳ್ಳಾಲ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವಕನೋರ್ವನ ಮೃತದೇಹ ಸೋಮೇಶ್ವರ ಸಮುದ್ರತೀರದಲ್ಲಿ ರವಿವಾರ ಸಂಜೆ ವೇಳೆ ಪತ್ತೆಯಾಗಿದೆ. ಮೃತವ್ಯಕ್ತಿ ಉಚ್ಚಿಲ ನಿವಾಸಿ ಭಾಸ್ಕರ್ ನಾಯಕ್ (32) ಎನ್ನಲಾಗಿದೆ.

ಅವರು ಶನಿವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಮನೆಮಂದಿ ಹುಡುಕಾಟ ನಡೆಸಿದ್ದರು. ರವಿವಾರ ಸಂಜೆ ವೇಳೆ ಸೋಮೇಶ್ವರ ಸಮುದ್ರ ತೀರದಲ್ಲಿ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -








