- Advertisement -
- Advertisement -
ಮಂಗಳೂರು: ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಲ್ಲಿ ಊಟ ಮಾಡಿದ ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಘಟನೆ ಕೊಲೆಯಲ್ಲಿ ಅಂತ್ಯವಾಗಿದ್ದು, ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸೋಹನ್ ಬಂಧಿತ ಆರೋಪಿ.
ಮೃತ ದುರ್ದವಿ ಸಂಜಯ್ ಕೂಲಿ ಕಾರ್ಮಿಕ, ಉತ್ತರ ಭಾರತ ಮೂಲದ ಸಂಜಯ್ ಎಂದು ಗುರುತಿಸಲಾಗಿದೆ. ಸಂಜಯ್ ಮತ್ತು ಸೋಹಾನ್ ಯಾದವ್ ಇಬ್ಬರ ನಡುವೆ ಜಗಳ ನಡೆದಿದ್ದು, ಸೋಹನ್ ಯಾದವ್ ಸಂಜಯ್ ನನ್ನು ಬಲವಾಗಿ ಹಿಂದಕ್ಕೆ ತಳ್ಳಿದ್ದ. ಕೆಳಗೆ ಬಿದ್ದ ಸಂಜಯ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಿಲಾದರು ಸಂಜಯ್ ಸಾವನಪ್ಪಿದಾನೆ.
ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಆರೋಪಿ ಸೋಹನ್ನನ್ನು ಬಜ್ಪೆ ಪೊಲೀಸರು ಮಂಗಳೂರು ರೈಲು ನಿಲ್ದಾಣದ ಬಳಿ ಮಾ. 7 ರಂದು ಮಧ್ಯಾಹ್ನ 1 ಗಂಟೆ ವೇಳೆಗೆ ಬಜ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
- Advertisement -