- Advertisement -
- Advertisement -
ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿದ್ದ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಶಾಲಾ ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಜೌನ್ಪುರ ಮೂಲದ ನಿವಾಸಿ ಕಳೆದ ಹತ್ತು ವರ್ಷಗಳಿಂದ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಯಲ್ಲಿ ಸಹಾಯಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಜಯ್ ಬಂಧಿತ ಆರೋಪಿ.
ಘಟನೆನಡೆದ ನಂತರ ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಾಳೆ . ಶಿಕ್ಷಕರು ಆಕೆಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಹಾಜರಾಗದ ಬಗ್ಗೆ ವಿಚಾರಿಸಿದಾಗ ಘಟನೆಯ ಬಗ್ಗೆ ಅವಳ ಸಹೋದರ ಶಿಕ್ಷಕರಿಗೆ ಮಾಹಿತಿ ನೀಡಿದ್ದು,ಆರೋಪಿಗಳು ಶಾಲೆಯಿಂದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದು, ಮಾದಕ ವಸ್ತು ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ತಕ್ಷಣದ ಕ್ರಮ ಕೈಗೊಳ್ಳದಿರುವ ಕಾರಣ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ತರಗತಿ ಶಿಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಆತನ ಮೂವರು ಸಹಚರರ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದಾರೆ.
- Advertisement -