Sunday, June 29, 2025
spot_imgspot_img
spot_imgspot_img

ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್!

- Advertisement -
- Advertisement -

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ದೊರಕಿದೆ. ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರ ಕೈ ಸೇರಿದ್ದು ಇದರಲ್ಲಿ 9 ತಿಂಗಳ ಗಂಡು ಮಗು ಸಹಜವಾಗಿ ಸಾವನ್ನಪ್ಪಿಲ್ಲ ಎಂದು ತಿಳಿದು ಬಂದಿದೆ.

ಇಷ್ಟು ದಿನ ಮಗು ಹಾಲಿಲ್ಲದೇ ಹಸಿವಿನಿಂದ ಸಾವನ್ನಪ್ಪಿದೆ ಎಂದೇ ಭಾವಿಸಲಾಗಿತ್ತು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಮಗುವಿನ ಕತ್ತನ್ನು ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ತಾಯಿ ಸಿಂಧೂರಾಣಿಯೇ 9 ತಿಂಗಳ ಗಂಡುಮಗುವಿನ ಕುತ್ತಿಗೆಗೆ ಹಸಿರು ಬಣ್ಣದ ಬಟ್ಟೆಯಿಂದ ಬಿಗಿದು ಉಸಿರುಗಟ್ಟಿಸಿ ಹತ್ಯೆಗೈದಿದ್ದಾಳೆ. ಇದಾದ ಬಳಿಕ ತಾನು ನೇಣು ಬಿಗಿದುಕೊಂಡಿದ್ದಳು ಎಂದು ತಿಳಿದು ಬಂದಿದೆ. ಮಗುವಿನ ಕೊಲೆ ರಿಪೋರ್ಟ್ ಬಂದ ಹಿನ್ನಲೆ ಮತ್ತೊಂದು ಎಫ್ ಐ ಆರ್ ದಾಖಲು ಮಾಡಿಕೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಡೆತ್​ನೋಟ್​​ನಲ್ಲಿ ಶಂಕರ್​ ಮೇಲೆ ಹಲವು ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಶಂಕರ್​ಗೆ ಸಂಬಂಧಿಸಿದ ಲ್ಯಾಪ್​ಟಾಪ್​ನ್ನು ವಶಕ್ಕೆ ಪಡೆಯಲಾಗಿದೆ. ಇದರ ಜೊತೆಯಲ್ಲಿ ಅಳಿಯಂದಿರ ಮೊಬೈಲ್​ ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ. ಲ್ಯಾಪ್​ಟಾಪ್​ ಹಾಗೂ ಮೊಬೈಲ್​ ರಿಟ್ರೀವ್​ ಮಾಡಲು ಸಿಐಡಿ ಸೈಬರ್​ ಸೆಲ್​ ಎಕ್ಸ್​ಪರ್ಟ್​ ಮೂಲಕ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

- Advertisement -

Related news

error: Content is protected !!