Wednesday, April 24, 2024
spot_imgspot_img
spot_imgspot_img

ಒಂದೇ ಕುಟುಂಬದ ಮೂವರು ಸಹೋದರಿಯರು ಆತ್ಮಹತ್ಯೆ..! 9 ದಿನಗಳ ನಂತರ ಪ್ರಕರಣ ಬೆಳಕಿಗೆ

- Advertisement -G L Acharya panikkar
- Advertisement -

ಒಂದೇ ಕುಟುಂಬದ ಮೂವರು ಸಹೋದರಿಯರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡ್ಯದಲ್ಲಿ ನಡೆದಿದೆ. ಒಂಬತ್ತು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಂಜಿತಾ (24), ಬಿಂದು (21), ಚಂದನ (18) ಆತ್ಮಹತ್ಯೆಗೆ ಶರಣಾದ ಸಹೋದರಿಯರಾಗಿದ್ದಾರೆ.

ಅನೇಕ ವರ್ಷಗಳ ಹಿಂದೆ ಪೋಷಕರು ಮೃತಪಟ್ಟಿದ್ದರು. ಅಂದಿನಿಂದ ಅಜ್ಜಿ ಜತೆಯಲ್ಲಿ ಇವರು ವಾಸವಿದ್ದರು. ಇತ್ತೀಚೆಗೆ ಅಜ್ಜಿ ಕೂಡ ಮೃತಪಟ್ಟಿದ್ದರು. ಅಜ್ಜಿ ಮರಣದ ಬಳಿಕ ಮಾನಸಿಕ ಖಿನ್ನತೆಗೆ ಇವರು ಒಳಗಾಗಿದ್ದರು. ಆತ್ಮಹತ್ಯೆಗೆ ಶರಣಾಗಿ ದಿನಗಳೇ ಕಳೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಬ್ಬನಹಳ್ಳಿ ಬಳಿಯ ಗಾರ್ಮೆಂಟ್ಸ್‌ನಲ್ಲಿ ಇಬ್ಬರು ಸಹೋದರಿಯರು ಕೆಲಸ ಮಾಡುತ್ತಿದ್ದರು. 9 ದಿನಗಳ ಹಿಂದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶವ ಕೊಳೆತು ವಾಸನೆ ಬಂದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!