- Advertisement -
- Advertisement -
ಕಡಬ: ಯುವಕನೋರ್ವ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಕಡಬ ಮರ್ದಾಳ ನಿವಾಸಿ ಶಫೀಕ್ ಮೃತರು ಎಂದು ತಿಳಿದು ಬಂದಿದೆ. ಇವರು ಬೆಂಗಳೂರಿನ ಯಲಹಂಕದ ಬಳಿ ಸೂಪರ್ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ನಿದ್ರೆಯಿಂದ ಎದ್ದಿದ್ದ ಶಫೀಕ್ ಬಳಿಕ ಎದೆನೋವು ಎಂದು ಹೇಳಿದ್ದಾರೆ. ತಕ್ಷಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಈ ವೇಳೆ ಅವರು ಮೃತಪಟ್ಟಿದ್ದಾರೆ. ಮೃತ ಶಫೀಕ್ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
- Advertisement -