Friday, May 10, 2024
spot_imgspot_img
spot_imgspot_img

ಕಡಬ: ಎರಡು ಜೀವಗಳನ್ನು ಬಲಿ ತೆಗೆದುಕೊಂಡ ಬೆನ್ನಲ್ಲೇ ಮತ್ತೋರ್ವ ಕೃಷಿಕನನ್ನು ಬೆನ್ನಟ್ಟಿದ ಕಾಡಾನೆ; ಆತಂಕದಲ್ಲಿ ಗ್ರಾಮಸ್ಥರು..!!

- Advertisement -G L Acharya panikkar
- Advertisement -
vtv vitla

ಕಡಬ: ಮರ್ಧಾಳ ಸಮೀಪದ ನೈಲ ಎಂಬಲ್ಲಿ ನಿನ್ನೆ ಕಾಡಾನೆಯು ಎರಡು ಜೀವಗಳನ್ನು ಬಲಿ ಪಡೆದ ಬೆನ್ನಲ್ಲೇ ಮತ್ತೊಂದೆಡೆ ಮಂಗಳವಾರ ಬೆಳ್ಳಂಬೆಳಗ್ಗೆ ಕೃಷಿಕರೋರ್ವರನ್ನು ಆನೆ ಬೆನ್ನಟ್ಟಿ ದಾಳಿ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣಕ್ಕೆ ಕಾರಣವಾಗಿದೆ.

ಸಂಪೂರ್ಣ ವರದಿ ಓದಿರಿ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಿಗಲಿದೆ ವಿದ್ಯಾರ್ಥಿವೇತನ..! ಇಂದೇ ವಿಟ್ಲದ ಬಿಎಂಎಸ್‌ ಕಛೇರಿ ಸಂಪರ್ಕಿಸಿ

ಮಂಗಳವಾರ ಬೆಳಗಿನ ಜಾವ ಕಡಬ ತಾಲೂಕಿನ ಕೊಂಬಾರು ಗ್ರಾಮದ ಪೆರುಂದೋಡಿ ನಿವಾಸಿ ಕೃಷಿಕ ಮೋಹನ್ ಎಂಬವರು ಮಂಗಳವಾರ ಬೆಳಿಗ್ಗೆ 3.30ರ ಸುಮಾರಿಗೆ ನೀರು ಹಾಯಿಸಲೆಂದು ತನ್ನ ತೋಟಕ್ಕೆ ತೆರಳಿದ್ದ ವೇಳೆ ಕಾಡಾನೆಯೊಂದು ಬೆನ್ನಟ್ಟಿದ್ದು, ಅದೃಷ್ಟವಶಾತ್ ಓಡಿ ತಪ್ಪಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಣಿಬಾಂಡ ಕಟ್ಟೆ ನಿವಾಸಿ ದೇವರಾಜ್ ಎಂಬವರ ಕೃಷಿ ತೋಟಕ್ಕೆ ಭಾಗಶಃ ಹಾನಿಯಾಗಿದೆ. ಕೊಂಬಾರು ಪರಿಸರದಲ್ಲಿ ಕಾಡಾನೆಯು ಕೃಷಿ ತೋಟಗಳಿಗೆ ಲಗ್ಗೆ ಇಟ್ಟಿದ್ದು, ಅಪಾರ ಕೃಷಿಯನ್ನು ಹಾನಿ ಮಾಡಿದೆ. ಕಟ್ಟೆ, ಪೆರುಂದೋಡಿ ಪರಿಸರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

- Advertisement -

Related news

error: Content is protected !!