- Advertisement -
- Advertisement -
ಕಡಬ: ಗ್ರಾಮಕರಣಿಕರೊಬ್ಬರು ಕಂಠ ಪೂರ್ತಿ ಕುಡಿದು ಬಾರ್ ಮುಂದೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಘಟನೆ ಕಡಬ ಸಮೀಪದ ಕಳಾರದಿಂದ ನಡೆದಿದೆ. ಸಂಜೆ ವೇಳೆ ಕಂಠ ಪೂರ್ತಿ ಬಿದ್ದಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಕೆಲ ಸಮಯದ ಬಳಿಕ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳೇ ಆತನನ್ನು ಮನೆಗೆ ತಲುಪಿಸಿರುವುದಾಗಿ ತಿಳಿದು ಬಂದಿದೆ. 15 ದಿನಗಳ ಹಿಂದೆ ಕುಡಿದು ಬಿದ್ದು ಕಣ್ಣಿಗೆ ಪೆಟ್ಟಾಗಿ ಚಿಂತಾಜನಕ ಸ್ಥಿತಿಯಲ್ಲಿ ಇವರು ಚಿಕಿತ್ಸೆ ಪಡೆದು ಮಂಗಳವಾರವಷ್ಟೇ ಆಸ್ಪತ್ರೆಯಿಂದ ಬಂದಿದ್ದರು.
ಕರ್ತವ್ಯಕ್ಕೆ ಸರಿಯಾದ ಸಮಯಕ್ಕೆ ಹಾಜರಾಗದೆ ಪಾನಮತ್ತರಾಗಿಯೇ ಕಚೇರಿಗೆ ಬರುತ್ತಿರುವುದಾಗಿ ಗ್ರಾಮದ ಜನರು ಈ ಹಿಂದೆ ಆರೋಪಿಸಿದ್ದರು. ಪಾನಮತ್ತನಾಗಿ ಸಾರ್ವಜನಿಕ ಸ್ಥಳದಲ್ಲಿ ಬೀಳುತ್ತಿರುವುದರಿಂದ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮುಜುಗರಪಡುವಂತಾಗಿದೆ. ಅಲ್ಲದೆ ಇಲಾಖೆಯ ಹೆಸರಿಗೆ ಕಳಂಕವಾಗಿದೆ. ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
- Advertisement -