- Advertisement -
- Advertisement -
ಕಡಬ: ಕಾಣಿಯೂರು ಗ್ರಾಮದ ಕಟ್ಟ ಎಂಬಲ್ಲಿ ವೀಣಾ ಎಂಬ ದಲಿತ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಕಂಬಳಿ ಮಾರುವ ನೆಪದಲ್ಲಿ ಬಂದು ಬಲತ್ಕಾರಕ್ಕೆ ಪ್ರಯತ್ನಿಸಿದ್ದು, ಇಂದು ಮಹಿಳೆಯ ಮನೆಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಭೇಟಿ ನೀಡಿ ನೊಂದ ಮಹಿಳೆಗೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಸುಳ್ಯ ಬಿ.ಜೆ.ಪಿ. ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು ಸೇರಿದಂತೆ ಊರಿನ ಪ್ರಮುಖರು ಉಪಸ್ಥಿತರಿದ್ದರು.
- Advertisement -