- Advertisement -
- Advertisement -
ಕಡಬ: ಕಾರು ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಬಾಲಕನೋರ್ವ ಮೃತಪಟ್ಟು 5 ಮಂದಿ ಗಂಭೀರ ಗಾಯಗೊಂಡ ಭೀಕರ ಘಟನೆ ಘಟನೆ ಕಡಬ ತಾಲೂಕಿನ ಮರ್ದಾಳ ಸಮೀಪ ನಡೆದಿದೆ.
ಮರ್ಧಾಳ ಕಡೆಯಿಂದ ಸುಬ್ರಹ್ಮಣ್ಯ ತೆರಳುತ್ತಿದ್ದ ಕಾರು ಹಾಗೂ ಧರ್ಮಸ್ಥಳ – ಸುಬ್ರಹ್ಮಣ್ಯ ನಡುವೆ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ. ಸಿ ಬಸ್ ಮರ್ಧಾಳ ಸಮೀಪದ ಐತ್ತೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಮುಖಾಮುಖಿ ಢಿಕ್ಕಿ ಹೊಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ 14ವರ್ಷದ ಬಾಲಕ ಮೃತಪಟ್ಟಿದ್ದು, ಐವರಿಗೆ ಗಂಭೀರ ಗಾಯಗೊಂಡಿದ್ದು ಅವರನ್ನು ಪ್ರತ್ಯೇಕ ಆಂಬ್ಯುಲೆನ್ಸ್ ಗಳಲ್ಲಿ ಪುತ್ತೂರು ಹಾಗೂ ಮಂಗಳೂರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
- Advertisement -