- Advertisement -
- Advertisement -
ಕಡಬ: ಮೊಬೈಲ್, ಪರ್ಸ್ ಮನೆಯಲ್ಲೇ ಬಿಟ್ಟು ರಿಕ್ಷಾದಲ್ಲಿ ಬಾಡಿಗೆಗೆಂದು ಹೋದ ಆಟೋ ಚಾಲಕನ ಮೃತದೇಹ ಫೆ. 16ರಂದು ಬೆಳಗ್ಗೆ ಬಲ್ನಾಡಿನ ಮಚ್ಚಿಮಲೆ ಬೊಲ್ಲಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಪತ್ತೆಯಾಗಿದೆ.
ಬಲ್ನಾಡು ಉಜ್ರುಪಾದೆ ನಿವಾಸಿ ಆಟೋ ರಿಕ್ಷಾ ಚಾಲಕ ಸುಂದರ ಪಿ ಅವರು ಫೆ .13 ರಂದು ಮನೆಯಿಂದ ಆಟೋ ರಿಕ್ಷಾದಲ್ಲಿ ಬಾಡಿಗೆಗಾಗಿ ತೆರಳಿದ್ದರು. ಆದರೆ ಮನೆಗೆ ಬಾರದ ಹಿನ್ನೆಲೆಯಲ್ಲಿ ಮೊಬೈಲ್ ಪೋನ್ ಕರೆ ಮಾಡಿದಾಗ ಅವರ ಮೊಬೈಲ್ ಮನೆಯಲ್ಲೇ ಇರುವುದು ಬೆಳಕಿಗೆ ಬಂದಿತ್ತು.
ಈ ಕುರಿತು ಸುಂದರ ಅವರ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಸುಂದರ ಅವರ ಮೃತ ದೇಹ ಅವರ ರಿಕ್ಷಾದಲ್ಲೇ ಪತ್ತೆಯಾಗಿದೆ.
- Advertisement -