Saturday, June 28, 2025
spot_imgspot_img
spot_imgspot_img

ಕಡಬ: ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮೂವರು ನೀರುಪಾಲು

- Advertisement -
- Advertisement -

ಕಡಬ: ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ಕಾರೊಂದು ಸೇತುವೆಯಿಂದ ಕೆಳಗೆ ಬಿದ್ದು ನೀರು ಪಾಲಾಗಿದ್ದು, 50 ಮೀಟರ್ ದೂರದಲ್ಲಿ ಪತ್ತೆಯಾಗಿದೆ.

ಬೈತಡ್ಕ ಮಸೀದಿಯ ಸಮೀಪವೇ ಇರುವ ಸೇತುವೆಗೆ ಕಾರೊಂದು ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಈ ಘಟನೆ ಬೈತಡ್ಕ ಮಸೀದಿಯ ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.

ಘಟನೆ ಕುರಿತಂತೆ ಸ್ಥಳೀಯರು ಪರಿಶೀಲನೆ ನಡೆಸುತ್ತಿದೆ. ನೀರು ಪಾಲಾಗಿದ್ದ ಕಾರು ಪತ್ತೆಯಾಗಿದ್ದು ಮೇಲೆಕ್ಕೆತ್ತಲು ಪ್ರಯತ್ನಿಸಿದಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಮುಂದೆ ಹೋಗಿದೆ. ಕಾರಿನೊಳಗಿದ್ದ ಗುತ್ತಿಗಾರು ಮೂಲದ ಮೂವರು ನೀರುಪಾಲಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ.

vtv vitla
- Advertisement -

Related news

error: Content is protected !!