Saturday, May 18, 2024
spot_imgspot_img
spot_imgspot_img

ಕಡಬ: ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ; ವಾಹನ ಸಮೇತ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು

- Advertisement -G L Acharya panikkar
- Advertisement -

ಕಡಬ: ವಾಹನವೊಂದರಲ್ಲಿ ಹಿಂಸಾತ್ಮಕ ರೀತಿಯಲ್ಲಿ, ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಭಜರಂಗದಳ ಕಾರ್ಯಕರ್ತರು ವಾಹನ ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳ್ಳಂಬೆಳಿಗ್ಗೆ ಕೋಡಿಂಬಾಳದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಭಾಗದಿಂದ ಪಂಜ ಮಾರ್ಗವಾಗಿ ಕೋಡಿಂಬಾಳದಲ್ಲಿರುವ ಅಕ್ರಮ ಕಸಾಯಿ ಖಾನೆಯೊಂದಕ್ಕೆ ದನವನ್ನು ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗುತ್ತಿದೆ.

ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದರು ಎಂದು ಸಂಘಟನೆಗಳು ಆರೋಪಿಸಿವೆ. ಕೋಡಿಂಬಾಳ ಸಮೀಪದ ಮುರಚೆಡವು ಎಂಬಲಿ ವಾಹನ ತಡೆ ಹಿಡಿದು ಬಳಿಕ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿರುವುದಾಗಿ ತಿಳಿದು ಬಂದಿದೆ ದನ ಸಾಗಾಟದ ವೇಳೆ ವಾಹನದಲ್ಲಿ ಮೂವರು ಇದ್ದರು ಎನ್ನಲಾಗಿದೆ.

- Advertisement -

Related news

error: Content is protected !!