- Advertisement -
- Advertisement -


ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರಿನ ಅಡಿಕೆ ಅಂಗಡಿಯೊoದರಲ್ಲಿ ಕಳ್ಳತನವಾದ ಘಟನೆ ನಡೆದಿದೆ.

ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇಡರ್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ ದೂರಿನಲ್ಲಿ ಸುಮಾರು 2ಕ್ವಿಂಟಲ್ ಅಡಿಕೆ ಕಳ್ಳತನವಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಪಕ್ಕದ ಪೂರ್ವೋದಯ ಸರ್ವೀಸ್ ಸ್ಟೇಷನ್ನಲ್ಲಿದ್ದ ಆಕ್ಸಿಜನ್ ಸಿಲಿಂಡರ್ ಕಳ್ಳತನವಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬೆಳ್ಳಾರೆ ಪೋಲಿಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.



- Advertisement -








