Saturday, June 28, 2025
spot_imgspot_img
spot_imgspot_img

ಕಡಬ: 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯ ಬಂಧನ..!!

- Advertisement -
- Advertisement -
vtv vitla

ಕಡಬ: ಪ್ರಕರಣವೊಂದಕ್ಕೆ ಸಂಬಂಧಿಸಿ 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ಕೆ ನಿವಾಸಿ ದೇವಪ್ಪ ಗೌಡರ ಪತ್ರ ಹರಿಪ್ರಸಾದ್ ಬಂಧನಕ್ಕೊಳಗಾದ ಆರೋಪಿ ಎಂದು ಗುರುತಿಸಲಾಗಿದೆ.

ಕಡಬ ಠಾಣೆಯಲ್ಲಿ ಈತನ ವಿರುದ್ಧ 341,326,506 ಜೊತೆಗೆ ಐ34 ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನ್ಯಾಯಾಲಯವು ಜನವರಿ 21 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ವರದಿ ತಿಳಿಸಿದೆ. ಪುತ್ತೂರು ವೃತ್ತ ನಿರೀಕ್ಷಕ ರವಿ ಬಿ.ಎಸ್ ಮತ್ತು ಕಡಬ ಠಾಣಾ ಎಸ್‌.ಐ ಆಂಜನೇಯ ರಶ್ಮಿ ನಿರ್ದೇಶನದಂತೆ ಕಡಬ ಠಾಣಾ ಎಚ್.ಸಿ ರಾಜು ನಾಯಕ್ ಮತ್ತು ಸಿರಾಜುದ್ದೀನ್ ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!