Friday, April 26, 2024
spot_imgspot_img
spot_imgspot_img

ಕಣಿಯೂರು: ಶ್ರೀ ಚಾಮುಂಡೇಶ್ವರೀ ಕ್ಷೇತ್ರದಲ್ಲಿ ಅರ್ಧ ಏಕಾಹ ಭಜನಾ ಸೇವೆ

- Advertisement -G L Acharya panikkar
- Advertisement -
driving

ಕಣಿಯೂರು: ನವರಾತ್ರಿಯ ಶುಭ ಸಮಯದಲ್ಲಿ ಶ್ರೀ ಚಾಮುಂಡೇಶ್ವರೀ ಕ್ಷೇತ್ರ, ಕಣಿಯೂರಿನಲ್ಲಿ ಅರ್ಧ ಏಕಾಹ ಭಜನಾ ಸೇವೆ ಜರುಗಿತು. ಈ ಸಂದರ್ಭದಲ್ಲಿ ಜರುಗಿದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪೂಜ್ಯ ಶ್ರೀ ಸ್ವಾಮೀಜಿಯವರು ಭಜನೆಯ ಮಹತ್ವದ ಬಗ್ಗೆ ತಿಳಿಸಿ, ಅನುಗ್ರಹ ಸಂದೇಶ ನೀಡಿದರು.

ಈ ವೇಳೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ಬಂಟ್ವಾಳ ತಾಲೂಕು ಅಧ್ಯಕ್ಷ ದಿನೇಶ್ ಮಾಮೇಶ್ವರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಗೋವರ್ಧನ ವಿಟ್ಲ, ಈಶ್ವರ ಭಟ್ ಕಣಿಯೂರು, ಶ್ರೀ ಮಹಮ್ಮಾಯೀ ಭಜನಾ ಮಂಡಳಿ (ರಿ.) ನಾಗವನ – ಕುಂಟ್ರಕಲ ಇದರ ಸಂಘಟನಾ ಕಾರ್ಯದರ್ಶಿ ಜಯರಾಮ ನಾಯ್ಕ ಕುಂಟ್ರಕಲ, ಕ್ಷೇತ್ರದ ಟ್ರಸ್ಟ್ ನ ಕಾರ್ಯದರ್ಶಿ ಹಾಗೂ ಟ್ರಸ್ಟಿಗಳು, ಭಕ್ತ ಬಾಂಧವರು ಉಪಸ್ಥಿತರಿದ್ದರು.

- Advertisement -

Related news

error: Content is protected !!