Tuesday, April 16, 2024
spot_imgspot_img
spot_imgspot_img

ಕಣ್ಣೂರು : ತಲಶ್ಯೇರಿಯಲ್ಲಿ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ

- Advertisement -G L Acharya panikkar
- Advertisement -

ಕಣ್ಣೂರು : ಸಿಪಿಎಂ ಕಾರ್ಯಕರ್ತರೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದಾರುಣ ಘಟನೆ ತಲಶ್ಯೇರಿ ಸಮೀಪದ ಪುನ್ನಾಳ್ ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಸಿಪಿಎಂ ಕಾರ್ಯಕರ್ತ ಹರಿದಾಸನ್ ( 54) ಮೃತಪಟ್ಟವರು. ಕೃತ್ಯದ ಹಿಂದೆ ಆರ್.ಎಸ್. ಎಸ್ – ಬಿಜೆಪಿ ಕೈವಾಡ ಇದೆ ಎಂದು ಸಿಪಿಎಂ ಆರೋಪಿಸಿದ್ದು , ತಲಶ್ಯೇರಿ ನಗರಸಭೆ ಹಾಗೂ ನ್ಯೂ ಮಾಹೆ ಗ್ರಾಮ ಪಂಚಾಯತ್ ವ್ಯಾಪ್ತಿ ಯಲ್ಲಿ ಇಂದು ಹರತಾಳಕ್ಕೆ ಕರೆ ನೀಡಿದೆ.

ಸಿಪಿಎಂನ ಸಕ್ರಿಯ ಕಾರ್ಯಕರ್ತರಾಗಿದ್ದ ಹರಿದಾಸನ್’ರವರು ವೃತ್ತಿಯಲ್ಲಿಮೀನುಗಾರರಾಗಿದ್ದರು. ಮುಂಜಾನೆ ಕೆಲಸ ಮುಗಿಸಿ ಮನೆ ಮರಳುತ್ತಿದ್ದಾಗ ಮನೆ ಸಮೀಪ ಹೊಂಚು ಹಾಕಿ ಕುಳಿತಿದ್ದ ತಂಡವು ದಾಳಿ ನಡೆಸಿದ್ದು ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಬಂದಾಗ ತಂಡವು ವಾಹನ ದಲ್ಲಿ ಪರಾರಿಯಾಗಿದೆ. ಗಂಭೀರ ಗಾಯಗೊಂಡ ಹರಿದಾಸನ್ ರವರನ್ನು ಸ್ಥಳೀಯರು ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು.

ಎರಡು ಬೈಕ್ ಗಳಲ್ಲಿ ಬಂದ ತಂಡವು ಈ ಕೃತ್ಯ ನಡೆಸಿದೆ ಎನ್ನಲಾಗಿದೆ. ಹರಿದಾಸನ್ ರ ಒಂದು ಕಾಲನ್ನು ದುಷ್ಕರ್ಮಿಗಳು ತುಂಡರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೊಬ್ಬೆ ಕೇಳಿ ಸ್ಥಳಕ್ಕೆ ತಲುಪಿದ್ದ ಸಹೋದರನ ಮೇಲೂ ಹಲ್ಲೆ ನಡೆಸಲಾಗಿದೆ. ಒಂದು ವಾರದ ಹಿಂದೆ ಕಾರ್ಯಕ್ರಮಕ್ಕೆ ಸಂಬಂಧಪಟ್ಟಂತೆ ಪುನ್ನಾಳ್ ನಲ್ಲಿ ಬಿಜೆಪಿ ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದರ ಪುನರಾವರ್ತನೆ ಈ ಕೊಲೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಘಟನಾ ಸ್ಥಳದ ಪರಿಸರದಲ್ಲಿ ಪೊಲೀಸರು ಬಂದೋಬಸ್ತ್ ತೆಗೆದುಕೊಂಡಿದ್ದು , ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ತೆಗೆದುಕೊಂಡಿದ್ದಾರೆ.

- Advertisement -

Related news

error: Content is protected !!