ಮಧ್ಯಪ್ರದೇಶದ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್ನಲ್ಲಿ ನಡೆದ ಬೆಂಕಿ ದುರಂತದಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ ಮೂರನೇ ಫ್ಲೋರ್ನಲ್ಲಿರುವ ಮಕ್ಕಳ ವಾರ್ಡ್ನಲ್ಲಿ, ನವಜಾತ ಶಿಶುಗಳೂ ಸೇರಿ ಒಟ್ಟು 40 ಮಕ್ಕಳು ದಾಖಲಾಗಿದ್ದರು. ಅದರಲ್ಲಿ ನಾಲ್ಕು ಮಕ್ಕಳು ಮೃತಪಟ್ಟಿದ್ದು, ಉಳಿದ 36 ಮಂದಿಯನ್ನು ಸುರಕ್ಷಿತ ಮಾಡಲಾಗಿದೆ.
ಸುಮಾರು 12ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸಿದ್ದಾರೆ. ಪ್ರಕರಣದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆದೇಶಿಸಿದ್ದು ಅಲ್ಲದೇ ಮೃತಮಕ್ಕಳ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
ನಿನ್ನೆ ಸಂಜೆ ಈ ದುರ್ಘಟನೆ ನಡೆದಿತ್ತು. ಮಕ್ಕಳನ್ನು ಪಾರು ಮಾಡಲು ಕೂಡಲೇ ರಕ್ಷಣಾ ಕಾರ್ಯಾಚರಣೆಯೂ ನಡೆದಿತ್ತು. ಹಲವು ರೋಗಿಗಳನ್ನುಸ್ಟ್ರೆಚರ್ನಲ್ಲಿ ಹಾಕಿ ಇನ್ನೊಂದು ಆಸ್ಪತ್ರೆಗೆ ಸಾಗಿಸಲಾಯಿತು. ಅಷ್ಟಾದರೂ ನಾಲ್ಕು ಮಂದಿ ಮಕ್ಕಳು ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಬೆಂಕಿ ಬೀಳುತ್ತಿದ್ದಂತೆ ಅಲ್ಲಿ ಅಡ್ಮಿಟ್ ಆದ ಮಕ್ಕಳ ಕುಟುಂಬದವರು ಆತಂಕದಿಂದ ಅಲ್ಲಿಗೆ ಧಾವಿಸಿದ್ದರು.