Friday, April 26, 2024
spot_imgspot_img
spot_imgspot_img

ಕರಾವಳಿಯಲ್ಲಿ ಮುಂಜಾನೆ ತಂಪೆರೆದ ಮಳೆರಾಯ; ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ..!!

- Advertisement -G L Acharya panikkar
- Advertisement -

ಮಂಗಳೂರು: ಬಿಸಿ ಬೇಗೆಯಿಂದ ಬಳಲಿದ್ದ ಕರಾವಳಿ ಜನತೆಗೆ ಇಂದು ಮುಂಜಾನೆ ಮಳೆರಾಯ ಕೊಂಚ ತಂಪೆರೆದಿದ್ದಾನೆ.

ಕಳೆದ ಕೆಲದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಸುರಿದ್ದು, ಇಂದು ಮುಂಜಾನೆ 6.30ರ ಸುಮಾರಿಗೆ ಮಂಗಳೂರು ನಗರದಲ್ಲಿ ಆರಂಭವಾದ ಮಳೆ ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಸುರಿದಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ, ಕರಾವಳಿ, ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಗಳಿದ್ದು , ಇದರ ಜತೆಗೆ ಉಷ್ಣಾಂಶವೂ 3 ಡಿ.ಸೆ.ಹೆಚ್ಚಾ ಗಲಿದೆ ಎಂದು ಮುನ್ಸೂಚನೆ ಕೊಟ್ಟಿದೆ.

ಇನ್ನು ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಏಕಾಎಕಿ ಸುರಿದ ಮಳೆಯಿಂದ ನಗರದಲ್ಲಿ ವಿದ್ಯುತ್ ಕೈಕೊಟ್ಟಿತ್ತು.

- Advertisement -

Related news

error: Content is protected !!