Wednesday, April 24, 2024
spot_imgspot_img
spot_imgspot_img

ಕರುನಾಡ ಯುವರತ್ನ ಇನ್ನಿಲ್ಲ; ಆಡುವ ಗೊಂಬೆ ನಿಂತು ಹೋದ ಮೇಲೆ ಪರಮಾತ್ಮನು ಕೈ ಬಿಟ್ಟ..

- Advertisement -G L Acharya panikkar
- Advertisement -

ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಇಂದು (ಅ.29) ಏರುಪೇರು ಉಂಟಾಗಿತ್ತು, ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುದ್ದರು, ಈಗ ಅವರು ನಿಧನರಾಗಿದ್ದಾರೆ ಎಂದು ತಿಳಿದದು ಬಂದಿದೆ. ಶುಕ್ರವಾರ ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್‌ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬ0ಧಿಸಿದ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದೆ. ಸದ್ಯ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿದ್ದಾರೆ ತಿಳಿದುಬಂದಿದೆ.

ಪುನೀತ್ ರಾಜ್‌ಕುಮಾರ್ ಆರೋಗ್ಯ ಸ್ಥಿತಿ ತೀವ್ರ ಕ್ರಿಟಿಕಲ್ ಆಗಿತ್ತು ಎಂದು ತಿಳಿದು ಬಂದಿತ್ತು. ಆಸ್ಪತ್ರೆ ಕಡೆಗೆ ಚಿತ್ರರಂಗದ ನಟ- ನಟಿಯರು ದೌಡಾಯಿಸುತ್ತಿದ್ದಾರೆ. ಕರುನಾಡೆ ಕಣ್ಣೀರಲ್ಲಿ ಮುಳುಗಿದೆ.

ಬೆಳಿಗ್ಗೆ 11.30ಕ್ಕೆ ಹೃದಯಾಘಾತಕ್ಕೆ ಒಳಗಾಗಿದ್ದರು. ಖಾಸಗಿ ಕ್ಲಿನಿಕ್ ಒಂದರಲ್ಲಿ ಇಸಿಜಿ ಮಾಡಿಸಿಕೊಂಡು ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ನಟ ಪುನೀತ್ ರಾಜ್ ಕುಮಾರ್ ಅವರು ಸೀರಿಯಸ್ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆಯನ್ನು ಮಾಡಲಾಗಿತ್ತು ಆದರೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಅಪ್ಪು ನಿಧನರಾಗಿದ್ದರೆ.

ಅಪ್ಪು ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂ ನಲ್ಲಿ ಸಿದ್ಧತೆ.

- Advertisement -

Related news

error: Content is protected !!