Saturday, June 28, 2025
spot_imgspot_img
spot_imgspot_img

ಮಂಗಳೂರಿನಲ್ಲಿ ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮೇಲೆ ತಲವಾರಿನಿಂದ ಹಲ್ಲೆ- ಆರೋಪಿ ನವಾಝ್ ಬಂಧನ !

- Advertisement -
- Advertisement -

ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೈದ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.

ಕುದ್ರೋಳಿ ನಿವಾಸಿ ನವಾಜ್ (21) ಬಂಧಿತ ಆರೋಪಿ.‌ ಕತ್ತಿಯಿಂದ ಹಲ್ಲೆ ಮಾಡಿದ್ದ ಪ್ರಮುಖ ಆರೋಪಿ 16 ವರ್ಷದ ಬಾಲಕ ನಾಪತ್ತೆಯಾಗಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ನಿನ್ನೆ ಮಧ್ಯಾಹ್ನ ಬೈಕಿನಲ್ಲಿ ಬಂದಿದ್ದ ಇಬ್ಬರು ಯುವಕರು ಕಾರ್ ಸ್ಟ್ರೀಟ್ ಬಳಿಯ ನ್ಯೂ ಚಿತ್ರಾ ಟಾಕೀಸ್ ಮುಂಭಾಗದಲ್ಲಿ ನಿಂತಿದ್ದ ಪೊಲೀಸರಿಗೆ ಹಲ್ಲೆಗೈದಿದ್ದರು. ಬೈಕಿನಲ್ಲಿ ಹಿಂಬದಿ ಸವಾರನಾಗಿದ್ದ 16 ವರ್ಷದ ಬಾಲಕ ಕತ್ತಿಯಿಂದ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಕೈಗೆ ಕಡಿದು ಪರಾರಿಯಾಗಿದ್ದ.

ಆರೋಪಿಗಳ ಪತ್ತೆಗಾಗಿ ಪೊಲೀಸ್ ಕಮಿಷನರ್, ವಿಶೇಷ ತಂಡ ರಚಿಸಿದ್ದರು. ಆರೋಪಿಗಳ ಬಗ್ಗೆ ಖಚಿತ ಸುಳಿವು ಸಿಕ್ಕಿದ್ದರಿಂದ ನಿನ್ನೆ ರಾತ್ರಿಯೇ ಪೊಲೀಸರು ದಾಳಿ ನಡೆಸಿದ್ದು ಒಬ್ಬನನ್ನು ಬಂಧಿಸಿದ್ದಾರೆ. ಆತನ ಜೊತೆಗಿದ್ದ ಅಪ್ರಾಪ್ತ ಬಾಲಕ ತಪ್ಪಿಸಿಕೊಂಡಿದ್ದಾನೆ.

- Advertisement -

Related news

error: Content is protected !!