ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್ ಇದರ ನೂತನ ರಾಜ್ಯ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸಾಮಾಜಿಕ, ಧಾರ್ಮಿಕ, ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಗುಣರಂಜನ್ ಶೆಟ್ಟಿ ಅವರು ಜಯಕರ್ನಾಟಕ ಜನಪರ ವೇದಿಕೆ, ಐಕೇರ್ ಬ್ರಿಗೇಡ್ (ರಿ), ಮಹಲಿಂಗೇಶ್ವರ ಸೇವಾ ಟ್ರಸ್ಟ್ (ರಿ) ಇದರ ಸ್ಥಾಪಕಧ್ಯಕ್ಷರೂ ಹೌದು. ಖ್ಯಾತ ಸೌತ್ ಇಂಡಿಯನ್ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಅವರ ಸಹೋದರ ಗುಣರಂಜನ್ ಶೆಟ್ಟಿ.
ಆಯ್ಕೆಯಾಗಿರುವ ಹಿನ್ನಲೆ ಬಿ.ಗುಣರಂಜನ್ ಶೆಟ್ಟಿರವರನ್ನು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರು ಮತ್ತು ಉತ್ತರಪ್ರದೇಶದ ಕೇಶರ್ ಗಂಜ್ನ ಲೋಕಸಭಾ ಸದಸ್ಯ ಬ್ರಿಜ್ ಭೂಷಣ್ ಶರಣ್ ಸಿಂಗ್ ರವರು ಅಭಿನಂದಿಸಿದರು.
ಈ ವೇಳೆ ಜಯಕರ್ನಾಟಕ ಜನಪರ ವೇದಿಕೆಯ ಉಪಾಧ್ಯಕ್ಷ ಆರ್ ಚಂದ್ರಪ್ಪ, ಬೆಂಗಳೂರು ಜಿಲ್ಲಾಧ್ಯಕ್ಷ ಶ್ರೀನಿವಾಸ್, ರಾಜ್ಯ ಮುಖಂಡ, ಉದ್ಯಮಿ ಪ್ರಸಾದ್ ಶೆಟ್ಟಿ ಹುಬ್ಳಿ, ಹಿರಿಯ ಸಲಹೆಗಾರರು ಹಾಗೂ ಲೆಕ್ಕ ಪರಿಶೋಧಕರ ಶ್ರೀನಿವಾಸ್ ವಿಟ್ಲ ಸೇರಿದಂತೆ ಮೊದಲಾದವರು ಜೊತೆಗಿದ್ದರು.
ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಅಭಿನಂದನೆಗಳ ಮಹಾಪೂರ
ಜಯಕರ್ನಾಟಕ ಜನಪರ ವೇದಿಕೆಯ ಸ್ಥಾಪಕಾಧ್ಯಕ್ಷರಾಗಿರುವ ಬಿ ಗುಣರಂಜನ್ ಶೆಟ್ಟಿ ಅವರಿಗೆ ಮತ್ತೊಂದು ಗರಿಮೆ ಸೇರಿಕೊಂಡಿದೆ. ಇದು ನಮಗೆಲ್ಲ ಅಪಾರ ಖುಷಿ ತಂದೆ ಎಂದು ಜಯಕರ್ನಾಟಕ ಜನಪರ ವೇದಿಕೆಯ ಉಪಾಧ್ಯಕ್ಷ ಆರ್ ಚಂದ್ರಪ್ಪ ಸಂತೋಷ ವ್ಯಕ್ತಪಡಿಸಿದರು. ಅಂತೆಯೇ ಜಯಕರ್ನಾಟಕ ಜನಪರ ವೇದಿಕೆಯ ಸಮಸ್ತ ಪದಾಧಿಕಾರಿಗಳ ವತಿಯಿಂದ ಸನ್ಮಾನಿಸಲಾಯಿತು.