ವಿಟ್ಲ: ಪ್ರತಿಯೊಬ್ಬ ಮನುಷ್ಯನು ಯಾರಿಗೂ ಶಾಶ್ವತವಲ್ಲದ ಈ ಭೂಮಿಯಲ್ಲಿ ಅಹಂಕಾರದಿಂದ ಜೀವಿಸಕೂಡದು, ಅಧಿಕಾರದ ವ್ಯಾಮೋಹವಿಲ್ಲದೇ ಎಲ್ಲರೂ ಸತ್ಯ, ನ್ಯಾಯ, ವಿನಯ, ತಾಳ್ಮೆಯಿಂದ ಜೀವನ ನಡೆಸಿ ಅಲ್ಲಾಹನ ಸಂಪ್ರೀತಿಯನ್ನು ಪಡೆಯಿರಿ ಎಂದು ಶೈಖುನಾ ಪೇರೋಡ್ ಉಸ್ತಾದರು ನುಡಿದರು.
ಕರ್ನಾಟಕ ರ ಸುನ್ನಿ ಯುವಜನ ಸಂಘ (ಎಸ್ವೈಎಸ್) ದ.ಕ. ಈಸ್ಟ್ ಜಿಲ್ಲಾ ಸಮಿತಿಯ ವತಿಯಿಂದ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನ ಮರ್ಹೂಂ ಜೋಗಿಬೆಟ್ಟು ಆಶಿಖ್ ಫಹದ್ ಫಖ್ರುದ್ದೀನ್ ವೇದಿಕೆಯಲ್ಲಿ ಗುರುವಾರ ಸ್ಟಿಮ್ಯುಲೇಟ್22 ಅಂಗವಾಗಿ ನಡೆದ ಜಿಲ್ಲಾ ಕ್ಲಾಸ್ ರೂಂ ಕಾರ್ಯಕ್ರಮದಲ್ಲಿ ಮುಖ್ಯ ತರಗತಿ ನಡೆಸಿ ಮಾತನಾಡಿದರು.ಎಸ್ವೈಎಸ್ ರಾಜ್ಯ ನಾಯಕ ಸಯ್ಯಿದ್ ಇಸ್ಮಾಯಿಲ್ ತಂಙಲ್ ಉಜಿರೆ ದುಆಃ ನೆರೆವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಸುನ್ನಿ ಜಂ-ಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಉದ್ಘಾಟಿಸಿದರು. ಎಸ್ವೈಎಸ್ ಈಸ್ಟ್ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಸಅದಿ ಮಜೂರು ಅಧ್ಯಕ್ಷತೆ ವಹಿಸಿದರು.
ಎಸ್ವೈಎಸ್ ರಾಜ್ಯಾಧ್ಯಕ್ಷ ಡಾ. ಎಂ.ಎಸ್.ಎಂ. ಝೈನಿ ಕಾಮಿಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ರಾಜ್ಯ ಎಸ್ವೈಎಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಫೀಳ್ ಸಅದಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಜಿ.ಎಂ.ಮುಹಮ್ಮದ್ ಕಾಮಿಲ್ ಸಖಾಫಿ, ರಾಜ್ಯ ಸದಸ್ಯ
ಕೆ.ಎಂ.ಸಿದ್ದೀಖ್ ಮೊಂಟುಗೋಳಿ, ಎಸ್ಎಂಎ ರಾಜ್ಯ ಕಾರ್ಯದರ್ಶಿ ಎನ್.ಎಸ್.ಉಮರ್ ಮಾಸ್ಟರ್ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಸಯ್ಯಿದ್ ಹಬೀಬುಲ್ಲಾಹ್ ತಂಙಳ್ ಕುಪ್ಪೆಟ್ಟಿ, ಸಯ್ಯಿದ್ ಎಸ್.ಎಂ.ತಂಙಳ್, ಸಯ್ಯಿದ್ ಅಬ್ದುಲ್ ಸಲಾಂ ತಂಙಳ್, ಸಯ್ಯಿದ್ ಸಾದಾತ್ ತಂಙಲ್, ಅಬೂಬಕ್ಕರ್ ಫೈಝಿ ಪೆರುವಾಯಿ, ಕೆ.ಇ.ಅಬ್ದುಲ್ ಖಾದರ್ ಸಾಲೆತ್ತೂರು, ಎಸ್ವೈಎಸ್ ರಾಜ್ಯ ಸಮಿತಿ ಕೋಶಾಧಿಕಾರಿ ಅಬ್ದುಲ್ ಹಕೀಂ ಕೊಡ್ಲಿಪೇಟೆ, ಸಾಂತ್ವನ ಕಾರ್ಯದರ್ಶಿ ಬಶೀರ್ ಸಅದಿ ಬೆಂಗಳೂರು, ಸದಸ್ಯರಾದ ಅಶ್ರಫ್ ಸಅದಿ ಮಲ್ಲೂರು, ಹಮೀದ್ ಬೀಜಕೊಚ್ಚಿ, ವಿ.ಪಿ.ಮೊಯ್ದಿನ್, ಅಹ್ಮದ್ ಮದನಿ ನೇರಳಕಟ್ಟೆ, ಈಸ್ಟ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ಹಮೀದ್ ಸಖಾಫಿ ಕೊಡುಂಗಾಯಿ, ಕೋಶಾಧಿಕಾರಿ ಜಿ.ಮುಹಮ್ಮದ್ ಕುಂಞಿ, ಸಾಮಾಜಿಕ ಕಾರ್ಯದರ್ಶಿ ಕರೀಂ ಹಾಜಿ ಚೆನ್ನಾರ್, ಸಾಂತ್ವನ ಕಾರ್ಯದರ್ಶಿ ಸ್ವಾಲಿಹ್ ಮುರ, ಜಿಲ್ಲಾ ಸದಸ್ಯ ಕೆ.ಬಿ.ಕಾಸಿಂ ಹಾಜಿ ಮಿತ್ತೂರು, ರಾಜ್ಯ ಟೀಮ್ ಇಸಾಬಾ ಡೈರೆಕ್ಟರ್ ಇಕ್ಬಾಲ್ ಬಪ್ಪಳಿಗೆ, ಜಿಲ್ಲಾ ಇಸಾಬಾ ಡೈರೆಕ್ಟರ್ ಸಂಶುದ್ದೀನ್ ಝುಂ.ಝಂ, ಕೆಸಿಎಪ್ ಸದಸ್ಯ ಉಮರ್ ಸಖಾಫಿ ಒಮಾನ್, ಖಲಂದರ್ ಕಬಕ, ಆದಂ ಹಾಜಿ ಪಡೀಲ್, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎಸ್ವೈಎಸ್ ಈಸ್ಟ್ ಜಿಲ್ಲಾ ಸದಸ್ಯರು ಸೇರಿದಂತೆ 20 ಸೆಂಟರುಗಳ ಹಾಗೂ 224 ಬ್ರಾಂಚುಗಳ ಸಾವಿರಕ್ಕೂ ಮಿಕ್ಕ ಪ್ರತಿನಿಧಿಗಳು ಹಾಗೂ ನೂರಕ್ಕೂ ಮಿಕ್ಕ ಟೀಂ ಇಸಾಬಾ ಸ್ವಯಂ ಸೇವಕರು ಭಾಗವಹಿಸಿದ್ದರು.
ಎಸ್ವೈಎಸ್ ಈಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ ಸ್ವಾದಿಖ್ ಮಾಸ್ಟರ್ ಮಲೆಬೆಟ್ಟು ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಅಬ್ಬಾಸ್ ಮದನಿ ವಂದಿಸಿದರು. ಸಂಘಟನಾ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮಂಗಳಪದವು, ದಅ್ವಾ ಕಾರ್ಯದರ್ಶಿ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಿಲ ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಯೂಸುಫ್ ಸಈದ್ ನೇರಳಕಟ್ಟೆ ಸಹಕರಿಸಿದರು.