Sunday, June 29, 2025
spot_imgspot_img
spot_imgspot_img

ಕಲಾಸಿ ಪಾಳ್ಯದಲ್ಲಿ ಮಾರಣಾಂತಿಕ ಹಲ್ಲೆ-ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ವಿಟ್ಲ: ವಿಟ್ಲದ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವಿಟ್ಲ ಕಲಾಸಿ ಪಾಳ್ಯದಲ್ಲಿ ನಡೆದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ ಪಡ್ನೂರು ಗ್ರಾಮದ ಕಡಂಬು ಸುರಂಗದಮೂಲೆ ನಿವಾಸಿ ಚಿದಾನಂದ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಟ್ಲ ಕಸಬ ಗ್ರಾಮದ ಕಲಾಸಿ ಪಾಳ್ಯ ಎಂಬಲ್ಲಿ ಜಯ ಕೊಟ್ಟಾರಿ ಎಂಬಾತನು ಚಿದಾನಂದ ಎಂಬವರಿಗೆ ಅವಾಚ್ಯ ಶಬ್ದಗಳಿಂದ ಬೈದು, ದಾಳಿ ನಡೆಸಿದ್ದಾನೆ.

ಜಯ ಕೊಟ್ಟಾರಿ ಮತ್ತು ಚಿದಾನಂದ ಇಬ್ಬರು ಪರಿಚಯಸ್ಥರಾಗಿದ್ದು. ನಿನ್ನೆ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಕಲಾಸಿ ಪಾಳ್ಯದಿಂದ ಕೆಲಸ ಮುಗಿಸಿ ಮನೆಗೆ ತೆರಳುವಾಗ ಏಕಾಏಕಿಯಾಗಿ ಜಯ ಕೊಟ್ಟಾರಿ, ಚಿದಾನಂದರವರನ್ನು ಅವಾಚ್ಯ ಶಬ್ದಗಳಿಂದ ಬೈದು, ದಾಳಿ ನಡೆಸಿದ್ದಾನೆ. ಕಬ್ಬಿಣದ ಪೈಪಿನಿಂದ ಚಿದಾನಂದರವರ ಹೊಟ್ಟೆಯ ಎಡಭಾಗಕ್ಕೆ ಹೊಡೆದ ಕಾರಣ ಗಾಯವಾಗಿದೆ. ಆ ಸಂದರ್ಭದಲ್ಲಿ ಚಿದಾನಂದ ಜೋರಾಗಿ ಬೊಬ್ಬೆ ಹಾಕಿದಾಗ ನಿನ್ನನ್ನು ಜೀವ ಸಹಿತ ಬಿಡಲಾರೆ ಎಂದು ಬೆದರಿಕೆ ಹಾಕಿ ಜಯ ಕೊಟ್ಟಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಹಲ್ಲೆಯಿಂದ ಗಾಯಗೊಂಡ ಚಿದಾನಂದರವರನ್ನು ವಿಟ್ಲದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯ ಕೊಟ್ಟಾರಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತಲೆ, ಪೊಲೀಸರಿಗೆ ಭಯಬೀತನಾಗಿ ವಿಟ್ಲದಿಂದ ಪರಾರಿಯಾಗಿದ್ದಾನೆ ಇವನ ಕುರಿತು ಶೋಧ ಕಾರ್ಯ ವಿಟ್ಲ ಪೊಲೀಸರು ನಡೆಸಿದ್ದಾರೆ.

- Advertisement -

Related news

error: Content is protected !!