- Advertisement -
- Advertisement -
ಕಲ್ಲಡ್ಕ: ದಿನ ಮಳೆಯಿಂದ ಪರದಾಡುತ್ತಿದ್ದ ಜನರು ಇಂದು ಟ್ರಾಫಿಕ್ ಜಾಮ್ನಿಂದ ತಾಸುಗಟ್ಟಲೇ ಪರದಾಟ ನಡೆಸುವಂತಾಯಿತು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ.
ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಸಂಚಾರ ಅಡಚಣೆ ಇನ್ನೂ ಮುಗಿದಿಲ್ಲ.
ಕಲ್ಲಡ್ಕ ಅಮ್ಟೂರು ಕ್ರಾಸ್ ನ ಬಳಿ ಹೆದ್ದಾರಿಯಲ್ಲಿ ಬೃಹತ್ ಹೊಂಡವೊಂದು ನಿರ್ಮಾಣವಾದ ಹಿನ್ನೆಲೆಯಲ್ಲಿ ಪ್ರಾರಂಭವಾದ ಟ್ರಾಫಿಕ್ ಜಾಮ್ ನಿರಂತರವಾಗಿ ಮುಂದುವರಿದಿದೆ. ಬೆಳಿಗ್ಗೆ ಹೊತ್ತು ಕೆಲಸಕ್ಕೆ ಹೋಗುವವರ ಜೊತೆ ಅಂಬ್ಯುಲೆನ್ಸ್ ವಾಹನಗಳು ಕೂಡ ಗಂಟೆಗಟ್ಟಲೇ ಕ್ಯೂನಲ್ಲಿ ನಿಂತು ಪರದಾಡುವಂತಾಯಿತು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪನಿ ಗುಂಡಿ ಮುಚ್ಚುವ ಕಾರ್ಯ ಮಾಡಿದೆ. ಆದರೆ ಕಾಮಗಾರಿ ಆರಂಭವಾದ ಬಳಿಕ ನಿರಂತರವಾಗಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.
- Advertisement -