Saturday, April 20, 2024
spot_imgspot_img
spot_imgspot_img

ಕಲ್ಲಡ್ಕ ವಲಯ ಬಂಟರ ಸಂಘದ ವತಿಯಿಂದ ಮನೆ ನಿರ್ಮಾಣಕ್ಕೆ ಕೆಸರು ಕಲ್ಲು ಹಾಕುವ ಕಾರ್ಯಕ್ರಮ

- Advertisement -G L Acharya panikkar
- Advertisement -

ಕಲ್ಲಡ್ಕ: ಕಲ್ಲಡ್ಕ ವಲಯ ಬಂಟರ ಸಂಘದ ವತಿಯಿಂದ ಗಣೇಶ್ ಶೆಟ್ಟಿ ಪಾತ್ರಜಾಲು ರವರಿಗೆ ಮನೆ ನಿರ್ಮಾಣಕ್ಕೆ ಕೆಸರು ಕಲ್ಲು ಹಾಕುವ ಕಾರ್ಯಕ್ರಮ ಇಂದು ಬೆಳಗ್ಗೆ ಪಾತ್ರಜಾಲಿನಲ್ಲಿ ನಡೆಯಿತು.

ಬಡ ಕುಟುಂಬದ ಗಣೇಶ್ ಶೆಟ್ಟಿ ಪಾತ್ರಜಾಲು ರವರಿಗೆ ಕಲ್ಲಡ್ಕ ವಲಯ ಬಂಟರ ಸಂಘದ ವತಿಯಿಂದ ಮನೆ ನಿರ್ಮಾಣ ಮಾಡಿ ಕೊಡುವ ಯೋಜನೆ ಹಾಕಿದ್ದು, ಆ ಪ್ರಯುಕ್ತ ಇಂದು ಕಲ್ಲಡ್ಕ ವಲಯ ಬಂಟರ ಸಂಘದ ಅಧ್ಯಕ್ಷರಾದ ಪದ್ಮನಾಭ ರೈ ರವರ ಅಧ್ಯಕ್ಷತೆಯಲ್ಲಿ ಮನೆ ನಿರ್ಮಾಣಕ್ಕೆ ಕೆಸರು ಕಲ್ಲು ಹಾಕುವ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಲ್ಲಡ್ಕ ವಲಯ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿಯಾದ ಗಣೇಶ್ ಶೆಟ್ಟಿ ಗೋಳ್ತಮಜಲು, ವೀರಕಂಬ ಗ್ರಾಮದ ಸಮಿತಿಯ ಬಂಟರ ಸಂಘದ ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ ಬೆಂಜೆಂತಿಮಾರು, ಯುವ ಬಂಟರ ಸಂಘ ಕಲ್ಲಡ್ಕ ವಲಯದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಸೀಮಾಜೆ ಹಾಗೂ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುಮಾರು ನಾಲ್ಕು ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಮನೆಗೆ ಕಲ್ಲಡ್ಕ ವಲಯ ಬಂಟರ ಸಂಘದ ಎಲ್ಲಾ ಗ್ರಾಮ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಸಹಾಯವನ್ನು ನೀಡಲಿದ್ದಾರೆ.

- Advertisement -

Related news

error: Content is protected !!