- Advertisement -
- Advertisement -
ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಆರಿಕ್ಕಾಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೊಗ್ರಾಲ್ ಪುತ್ತೂರಿನ ತನ್ಸಿಹಾ(17) ಮೃತಪಟ್ಟ ವಿದ್ಯಾರ್ಥಿ.
ಕುಂಬಳೆಯ ಖಾಸಗಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದ. ಉಪ್ಪಳದಿಂದ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ತನ್ಸಿಹಾನನ್ನು ಕುಂಬಳೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರಿಗೆ ಕರೆತಂದಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದ ಯುವಕ ಮೃತ ಪಟ್ಟಿದ್ದಾನೆ.
- Advertisement -