ಬೆಳಗಾವಿ: ಕಾಂಗ್ರೆಸ್ ಕಾರ್ಯಕರ್ತೆ ನವ್ಯಶ್ರೀ ರಾವ್ ಅವರನ್ನು ಬೆಳಗಾವಿ ರಾಮದೇವ ಹೋಟೆಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣದ ವೇಳೆ ನವ್ಯಶ್ರೀ ಪ್ರತಿಭಟನೆಗೆ ಮುಂದಾಗಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎದುರು ಪ್ರತಿಭಟನೆ ಮಾಡಬೇಕು ಎಂದುಕೊಂಡಿದ್ದರು. ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಜಕುಮಾರ ಟಾಕಳೆ ಬಂಧನಕ್ಕೆ ಆಗ್ರಹಿಸಿ ಸಚಿವ ಗೋವಿಂದ ಕಾರಜೋಳ ಎದುರೇ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಎಪಿಎಂಸಿ ಠಾಣೆ ಪೊಲೀಸರಿಂದ ನವ್ಯಶ್ರೀ ವಶಕ್ಕೆ ಪಡೆದಿದ್ದಾರೆ.
ಕೆಲ ತಿಂಗಳ ಹಿಂದೆ ನವ್ಯಶ್ರೀ ರಾವ್, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಜತೆ ಅಶ್ಲೀಲ ವೀಡಿಯೋ ಒಂದರಲ್ಲಿ ಕಾಣಿಸಿಕೊಂಡ ವೀಡಿಯೋ ಎಲ್ಲೆಡೆ ವೈರಲ್ ಆಗಿತ್ತು. ರಾಜಕುಮಾರ್ ಟಾಕಳೆ ವೀಡಿಯೋ ವೈರಲ್ ಮಾಡಿ ಮೋಸ ಮಾಡಿದ್ದಾನೆಂದು ನವ್ಯಶ್ರಿ ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಳು. ಆದರೆ ಈ ಬಗ್ಗೆ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳದ್ದರಿಂದ ನವ್ಯಶ್ರೀ ರಾಜಕುಮಾರ್ ಟಾಕಳೆಯನ್ನು ಬಂದಿಸುವಂತೆ ಪ್ರತಿಭಟನೆಗೆ ನಿರ್ಧರಿಸಿದ್ದಳು.