ಚಿಕ್ಕಬಳ್ಳಾಪುರ: ಕಾಂಗ್ರೆಸ್ನವ್ರು ಮೇಕೆದಾಟು ಪಾದಯಾತ್ರೆ ಮಾಡಲಿ, ಕಾನೂನು ಅದರ ಕೆಲಸ ಮಾಡುತ್ತೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಟಾಂಗ್ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಗೆ ಕೆಲವೇ ಗಂಟೆಗಳು ಬಾಕಿಯಿದ್ದು ಚಟುವಟಿಕೆಗಳು ಜೋರಾಗಿವೆ. ಇದರ ಮುಂದಾಳತ್ವನ್ನು ವಹಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡ ಮೇಕೆದಾಟು ಸಂಗಮಕ್ಕೆ ತೆರಳಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಇತ್ತ ಆಡಳಿತಾರೂಢ ಬಿಜೆಪಿ ನಾಯಕರು ಸಾಧ್ಯವಾದಷ್ಟು ಮಟ್ಟಿಗೆ ಪಾದಯಾತ್ರೆಯನ್ನು ಠುಸ್ ಮಾಡುವ ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ.
ಪಾದಯಾತ್ರಗೆ ಸಂಬಂಧಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಕಾಂಗ್ರೆಸ್ ನವರು ಪಾದಯಾತ್ರೆ ಮಾಡಿದ್ರೆ, ಕಾನೂನು ಅದರ ಕೆಲಸ ಮಾಡಲಿದೆ. ಅದರಲ್ಲಿ ಏನು ವಿಶೇಷತೆಯಿಲ್ಲ. ಇನ್ನು ಸರ್ಕಾರ ಜಾರಿಗೆ ತಂದಿರುವ ವಿಕೇಂಡ್ ಕರ್ಫ್ಯೂಗೆ ಉತ್ತಮವಾದ ಸ್ಪಂದನೆ ದೊರಕಿದ್ದು ಒಮಿಕ್ರಾನ್ ನಿಯಂತ್ರಣಕ್ಕೆ ಜನರ ಸಹಕಾರ ಅತ್ಯಾವಶ್ಯಕ ಎಂದು ಸುಧಾಕರ್ ತಿಳಿಸಿದ್ದಾರೆ.