ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ಜಿ ಪರಮೇಶ್ವರ್ ರವರ ತಂಡ ಮಂಗಳೂರಿನಲ್ಲಿ ಕರಾವಳಿ ಭಾಗದ ಸಂಘ ಸಂಸ್ಥೆ ಗಳ ಅಭಿಪ್ರಾಯ ಸಂಗ್ರಹಣೆ, ಚುನಾವಣಾ ಪೂರ್ವ ಸಿದ್ದತೆ ಮಾಡುವ ಸಂದರ್ಭ ಪಂಚಾಯತ್ ರಾಜ್ ಸಂಘಟನೆ ಪರವಾಗಿ ಸ್ಥಳೀಯ ಸಂಸ್ಥೆಗಳ ವಿಚಾರವಾಗಿ ಕೇರಳ ಮಾದರಿ ವ್ಯವಸ್ಥೆ ಜಾರಿಗೆ ತರಬೇಕು ಸ್ಥಳೀಯ ಸಂಸ್ಥೆಯ ಪ್ರತಿನಿಧಿಗಳ ಮತ್ತು ಕೆಲವು ಇನ್ನಿತರ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸಬಲೀಕರಣಗೊಳಿಸುವ ಅಂಶಗಳನ್ನು ಹೊಂದಿರುವ ಮನವಿಯನ್ನು ನೀಡಿ ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರ ನೇತೃತ್ವದ ನಿಯೋಗ ವಿವರಿಸಿತು.
ಮನವಿಯನ್ನು ಆಲಿಸಿ ಮಾತಾಡಿದ ಪರಮೇಶ್ವರ್ ರಾಜ್ಯದಲ್ಲೇ ದಕ್ಷಿಣ ಕನ್ನಡ ಪಂಚಾಯತ್ ರಾಜ್ ಸಂಘಟನೆ ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎಂದರು. ಮನವಿ ಸ್ವೀಕರಿಸಿದ ಜಿ.ಪರಮೇಶ್ವರ್ ಮತ್ತು ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷರುಗಳಾದ ಪ್ರೊಫೆಸರ್ ರಾಧಾಕೃಷ್ಣ ಮತ್ತು ಮಧು ಬಂಗಾರಪ್ಪ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆಯಿತ್ತರು. ಸಕಾರಾತ್ಮಕ ಭರವಸೆಗೆ ಪಂಚಾಯತ್ ರಾಜ್ ನಿಯೋಗದ ಅಧ್ಯಕ್ಷರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ , ಮಾಜಿ ಶಾಸಕ ಜೆ.ಆರ್ ಲೋಬೊ , ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ , ಮಾಜಿ ಉಪಾಧ್ಯಕ್ಷ ಎಂ ಎಸ್ ಮಹಮ್ಮದ್ ಪಂಚಾಯತ್ ರಾಜ್ ಮಾಜಿ ಜಿಲ್ಲಾಧ್ಯಕ್ಷ ಶುಭೋದಯ ಆಳ್ವ , ಮಂಗಳೂರು ದಕ್ಷಿಣ ಬ್ಲಾಕ್ ಪಂಚಾಯತ್ ರಾಜ್ ಅಧ್ಯಕ್ಷ ಅಶ್ವಿನಿ ರಾಜ್, ಮಲ್ಲಿಕಾ ಪಕ್ಕಳ ಮತ್ತಿತರರು ಉಪಸ್ಥಿತರಿದ್ದರು.