- Advertisement -
- Advertisement -

ಮಂಡ್ಯ: ಕಾಡುಹಂದಿಯ ಬೇಟೆಗೆ ಬಂದಿದ್ದ ಬೇಟೆಗಾರರಿಂದ ಹಂದಿ ಎಂದು ತಿಳಿದು ಹೊಡೆದ ಗುಂಡು ಯುವಕನಿಗೆ ತಗುಲಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಗುಂಡೇಟು ತಗುಲಿದ ಯುವಕ ಮಾದೇಶ್ (25) ಎನ್ನಲಾಗಿದೆ.
ಮೈಸೂರು ಜಿಲ್ಲೆಯ 6 ಮಂದಿ ಯುವಕರ ತಂಡ ಬೇಟೆಗೆ ಬಂದಿದ್ದು, ನಾಡ ಬಂದೂಕು ಬಳಸಿ ಕಾಡುಹಂದಿ ಬೇಟೆಗೆ ಈ ತಂಡ ಬಂದಿತ್ತು. ಮಾದೇಶ ಅವರ ಕಬ್ಬಿನ ಗದ್ದೆಯಲ್ಲಿ ಹಂದಿಗಾಗಿ ತಂಡ ಶೋಧ ನಡೆಸುತ್ತಿತ್ತು. ಈ ಸಮಯದಲ್ಲಿ ಅದೇ ಗದ್ದೆಯ ಬದುವಿನಲ್ಲಿ ಮಾದೇಶ ಹುಲ್ಲು ಕೊಯ್ಯುತ್ತಿದ್ದ ಸಂದರ್ಭದಲ್ಲಿ ಫೈರಿಂಗ್ ಮಾಡಿದ್ದಾರೆ.


- Advertisement -