- Advertisement -
- Advertisement -
ಕಾಪು: ಭಾರಿ ಗಾಳಿ ಮಳೆಯಿಂದಾಗಿ ಮನೆಯ ಅಡುಗೆಕೋಣೆಯ ಮೇಲ್ಛಾವಣಿ ಕುಸಿದು ಮಹಿಳೆಯೋರ್ವರು ಗಾಯಗೊಂಡಿರುವ ಘಟನೆ ಮೂಳೂರು ವೀರಮಾರುತಿ ಕಾಲನಿ ಸಮೀಪ ಇಂದು ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ರತ್ನ ಪುತ್ರನ್ ಎಂಬ ಮಹಿಳೆ ಗಾಯಗೊಂಡಿದ್ದು, ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿರುವ ವೇಳೆ ಈ ಘಟನೆ ನಡೆದಿದೆ. ಮೇಲ್ಛಾವಣಿ ಕುಸಿದ ಪರಿಣಾಮ ಸುಮಾರು ಐವತ್ತು ಸಾವಿರಕ್ಕೂ ಅಧಿಕ ನಷ್ಟ ಉಂಟಾಗಿರಬಹುದೆಂದು ಅಂದಾಜಿಸಲಾಗಿದೆ.
- Advertisement -