Tuesday, April 23, 2024
spot_imgspot_img
spot_imgspot_img

ಕಾಪು: ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ.!

- Advertisement -G L Acharya panikkar
- Advertisement -

ಕಾಪು: ಎಂಟು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ 2016ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರು ವರ್ಷಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದ ವ್ಯಕ್ತಿಯನ್ನು ವಿಜಯನಗರ ಜಿಲ್ಲೆಯ ಮೀರಕೋರನ ಹಳ್ಳಿಯ ನಿವಾಸಿ ನಾಗನಗೌಡ (39) ಎಂದು ಗುರುತಿಸಲಗಿದೆ. ಏಪ್ರಿಲ್ 24 ರಂದು ಆತನ ಹುಟ್ಟೂರಾದ ಮೀರಕೋರನ ಹಳ್ಳಿಯಲ್ಲಿ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿಯು 2014 ರಲ್ಲಿ ಕಾಪು ತಾಲೂಕಿನ ಮಣಿಪುರ ಗ್ರಾಮದ ಮಹಿಳೆಯ ಮೊಬೈಲ್ ಫೋನ್‌ಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದ್ದು, ಆಕೆಯ ಪೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಕರೆಗಳನ್ನು ಸಹ ಮಾಡಿದ್ದಾನೆ. ಆರೋಪಿ ವಿರುದ್ಧ ಮಹಿಳೆಯ ಪತಿ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿ ವಿದೇಶಕ್ಕೆ ಹೋಗಿದು, 2016ರಲ್ಲಿ ಆರೋಪಿಯ ಪತ್ತೆಗೆ ಉಡುಪಿ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಒಂದು ತಿಂಗಳ ಹಿಂದೆ ಸ್ವಗ್ರಾಮಕ್ಕೆ ಬಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -

Related news

error: Content is protected !!