Thursday, March 28, 2024
spot_imgspot_img
spot_imgspot_img

ಕಾಫಿ ತೋಟದಲ್ಲಿ ಪಾಕ್‌ ಗೆಲುವಿನ ಸಂಭ್ರಮಾಚಾರಣೆ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

- Advertisement -G L Acharya panikkar
- Advertisement -
vtv vitla

ಚಿಕ್ಕಮಗಳೂರು: ಕಾಫಿ ತೋಟದಲ್ಲಿನ ಕಾರ್ಮಿಕರು ಪಾಕಿಸ್ತಾನದ ಗೆಲುವನ್ನು ಆಚರಿಸಿದ ಘಟನೆ ನಡೆದಿದೆ. ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ಗೆಲುವಿನ ಆಚರಣೆ ಮಾಡಿದ ಅಸ್ಸಾಂ ಮೂಲದವರು ಎನ್ನಲಾದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಕಾಫಿತೋಟದಲ್ಲಿ ಈ ಘಟನೆ ನಡೆದಿದೆ. ಅಸ್ಸಾಂ ಮೂಲದ ಅಜರ್ ಅಲಿ, ಆಹಿಲ್ ಉದ್ದಿನ್, ಸೇರಿದಂತೆ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟಿ20 ವಿಶ್ವಕಪ್‌ ನ ನ್ಯೂಜಿಲ್ಯಾಂಡ್ ವಿರುದ್ಧ ಪಾಕಿಸ್ತಾನ ಗೆಲವು ಸಾಧಿಸಿತ್ತು. ಪಾಕಿಸ್ತಾನದ ಗೆಲುವನ್ನ ಸಂಭ್ರಮಿಸಿದ ಕಿಡಿಗೇಡಿಗಳು ಎಸ್ಟೇಟ್‌ ನಲ್ಲಿ ಪಾಕ್ ಪರ ಜಿಂದಾಬಾದ್ ಎಂದು ಕೂಗಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಇತರ ಕಾರ್ಮಿಕರು ಈ ವಿಚಾರವನ್ನು ಎಸ್ಟೇಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ. ಎಸ್ಟೇಟ್ ಮ್ಯಾನೇಜರ್ ನಾರಾಯಣಮೂರ್ತಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬಾಳೆಹೊನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಈ ಕಾಫಿ ತೋಟಗಳಲ್ಲಿ ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದವರು ಅಕ್ರಮವಾಗಿ ಬಂದಿರುವ ಆರೋಪವಿದೆ.

- Advertisement -

Related news

error: Content is protected !!