Saturday, May 18, 2024
spot_imgspot_img
spot_imgspot_img

ಕಾರು ಲಾರಿ ಭೀಕರ ಅಪಘಾತದಲ್ಲಿ ಹಾರಿಹೋಯಿತು ಒಂದೇ ಕುಟುಂಬದ ನಾಲ್ವರ ಪ್ರಾಣಪಕ್ಷಿ

- Advertisement -G L Acharya panikkar
- Advertisement -

ಕಾರು – ಲಾರಿ ನಡುವೆ ಢಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ರಾಯಚೂರಿನ ಬಾಲಯ್ಯ ಕ್ಯಾಂಪ್ ಬಳಿ ಈ ದುರ್ಘಟನೆ ನಡೆದಿದೆ. ಮೃತರನ್ನು ಮಧ್ಯಪ್ರದೇಶ ಮೂಲದ ಅಮರದೀಪ್‌ ಸೆಕ್ಸೇನಾ​ (35), ಪೂರ್ಣಿಮಾ ಸೆಕ್ಸೇನಾ (30) ಮಕ್ಕಳಾದ ಜಿತಿನ್​ (12) ಮತ್ತು ಮಾಹೀನ್​ (7) ಎಂದು ಗುರುತಿಸಲಾಗಿದೆ.

ಎರಡು ವಾಹನಗಳು ಮುಖಾಮುಖಿ ಢಿಕ್ಕಿಯಾಗಿದ್ದು, ದುರ್ಘಟನೆ ಸಂಭವಿಸಿದೆ. ಮೃತ ನಾಲ್ವರು ಮಧ್ಯಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಎರಡು ಜೆಸಿಬಿಯಿಂದ ಅಪಘಾತ ವಾಹನಗಳ ತೆರವು ಮಾಡಿದ್ದು, ಮೃತ ದೇಹಗಳನ್ನು ಸಿಂಧನೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!